ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ: ಎಎಪಿ ಆರೋಪ

Date:

ಬೆಂಗಳೂರಿನಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ಹಿಡಿದು ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. ತಕ್ಷಣವೇ ಹುಕ್ಕಾ ಬಾರ್‌ಗಳನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ವಕೀಲರಾದ ಲೋಹಿತ್ ಒತ್ತಾಯಿಸಿದರು.

- Advertisement -

ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇರುವ ಹುಕ್ಕಾಬಾರ್‌ಗಳನ್ನು ನಿಲ್ಲಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ ಒಂದು ತಿಂಗಳ ನಂತರ, ನಗರದ ಹುಕ್ಕಾಬಾರ್‌ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿದೆ. ಸಚಿವರು ಬರಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇವು ಆದೇಶಗಳಾಗಿ ಬದಲಾಗುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಗಾಂಜಾ ವಿಚಾರದಲ್ಲಿ ರಾಜ್ಯದಲ್ಲಿ ಪ್ರತಿ ದಿನ 100 ರಿಂದ 150 ಪ್ರಕರಣ ದಾಖಲಾಗುತ್ತಿವೆ. ಈ ಗಾಂಜಾ ಸೇವನೆಗೆ ಹುಕ್ಕಾ ಬಾರ್ ಸುರಕ್ಷಿತ ತಾಣಗಳಾಗಿವೆ. ಗಾಂಜಾ ಮಿಶ್ರಣ ಮಾಡಿ ಹುಕ್ಕಾ ಸೇವನೆ ಮಾಡಲಾಗುತ್ತಿದೆ. ಮಧ್ಯರಾತ್ರಿ 2-3 ಗಂಟೆವರೆಗೂ ಇವು ತೆರೆದಿರುತ್ತವೆ. ಇದಕ್ಕೆ ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಇಂದು ರಸ್ತೆ ಬದಿಗಳಲ್ಲಿ ಹುಕ್ಕಾ ಸೇದುವ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ಇದೆ. ಆದರೆ, ಇದು ಕಾನೂನಾಗಿ ಬದಲಾಗಬೇಕು” ಎಂದು ಆಗ್ರಹಿಸಿದರು.

“ಶೀಘ್ರದಲ್ಲೇ ಹುಕ್ಕಾ ಬಾರ್‌ಗಳನ್ನು ಮುಚ್ಚದಿದ್ದರೆ ಆಮ್ ಆದ್ಮಿ ಪಕ್ಷದಿಂದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು. ನಾವೇ ಹುಕ್ಕಾ ಬಾರ್‌ಗಳನ್ನು ಮುಚ್ಚಿಸಬೇಕಾಗುತ್ತದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಲಿ” ಎಂದು ಎಚ್ಚರಿಸಿದರು.

ಎಎಪಿ ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾತನಾಡಿ, “ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಯುವ ಸಬಲೀಕರಣ ಸಚಿವ ನಾಗೇಂದ್ರ ಸಭೆ ನಡೆಸಿ, ಹುಕ್ಕಾಬಾರ್ ಅನಧಿಕೃತ ಅದನ್ನು ನಿಲ್ಲಿಸುತ್ತೇವೆ. ತಂಬಾಕು ಮಾರಾಟ ನಿಯಂತ್ರಣ ಮಾಡುವುದಾಗಿ ಹೇಳಿದ್ದರೂ ಇನ್ನೂ ಆದೇಶ ಹೊರಡಿಸಿಲ್ಲ. ಬೆಂಗಳೂರಿನ ಅಶೋಕನಗರ ವ್ಯಾಪ್ತಿಯ ಎಂಜಿ ರಸ್ತೆ, ರೆಸಿಡೆನ್ಸಿ ರಸ್ತೆಯಲ್ಲಿ 24 ಹುಕ್ಕಾ ಬಾರ್‌ಗಳಿವೆ. ಪ್ರತಿಯೊಂದು ಹುಕ್ಕಾ ಬಾರ್‌ನ ಬಾಡಿಗೆ ಒಂದರಿಂದ ಒಂದೂವರೆ ಲಕ್ಷ ರೂ. ಇದ್ದರೆ, 75 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಹಫ್ತಾ ನೀಡುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

“ಬಹುತೇಕ ಹುಕ್ಕಾ ಬಾರ್‌ಗಳು ಪ್ರತಿಷ್ಠಿತ ವ್ಯಕ್ತಿಗಳು, ಶಾಸಕರು ಅವರ ಬೇನಾಮಿಗಳು ನಡೆಸುತ್ತಿರುವುದರಿಂದ ಪೊಲೀಸರು ಕೂಡ ಇವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ. ಎಂಜಿ ರಸ್ತೆಯಲ್ಲಿರುವ ಪ್ರತಿಷ್ಠಿತ ನಾಲ್ಕು ಹುಕ್ಕಾ ಬಾರ್‌ಗಳು ಆ ಏರಿಯಾದ ಶಾಸಕರಿಗೆ ಸೇರಿವೆ. ಅಲ್ಲಿಗೆ ನಗರದ ಪ್ರತಿಷ್ಠಿತ ವ್ಯಕ್ತಿಗಳ ಮಕ್ಕಳು ಕೂಡ ಬಂದು ಹೋಗುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಂಡನನ್ನು ತಾನೇ ಕೊಲೆ ಮಾಡಿ ಹುಡುಕಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದ ಎರಡನೇ ಪತ್ನಿ

“ಆ ಭಾಗದಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಗಳಿವೆ. ಕಾಲೇಜುಗಳಿವೆ ಈ ಹುಕ್ಕಾ ಬಾರ್‌ಗಳು ಯುವ ಜನರನ್ನು ಹಾಳು ಮಾಡುತ್ತಿವೆ. ಮೊದಲು ಸ್ನೂಕರ್ ಗೇಮ್‌ಗಳಿದ್ದ ಜಾಗಗಳನ್ನು ಹುಕ್ಕಾ ಬಾರ್‌ಗಳನ್ನಾಗಿ ಬದಲಾಯಿಸಲಾಗಿದೆ. ಹಳೆ ಸರ್ಕಾರ ಪಡೆಯುತ್ತಿದ್ದ ಕಮಿಷನ್ ಅನ್ನು ನಿಮ್ಮ ಸರ್ಕಾರಕ್ಕೆ ಶಿಫ್ಟ್ ಮಾಡಿಕೊಳ್ಳಲು ಹುಕ್ಕಾಬಾರ್ ನಿಲ್ಲಿಸುವ ಹೇಳಿಕೆ ನೀಡಿದ್ದಾರೆ ಅಥವಾ ನಿಮಗೆ ನಿಜವಾಗಿಯೂ ಯುವ ಜನರ ಆರೋಗ್ಯದ ಮೇಲೆ ಕಾಳಜಿ ಇದೆಯಾ?” ಎಂದು ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ಅವರನ್ನು ಪ್ರಶ್ನಿಸಿದರು.

“ಇನ್ನೊಂದು ತಿಂಗಳಿನಲ್ಲಿ ಹುಕ್ಕಾ ಬಾರ್‌ಗಳನ್ನು ನಿಲ್ಲಿಸದಿದ್ದರೆ, ಅಲ್ಲಿ ನಡೆಯುವ ಚಟುವಟಿಕೆಗಳನ್ನು ವಿಡಿಯೋ ಮಾಡಿ ಬ್ರಾಂಡ್ ಬೆಂಗಳೂರಿಗೆ ಟ್ಯಾಗ್ ಮಾಡಿ ಜನರ ಮುಂದೆ ತೋರಿಸುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...