ಜಮಾಅತೆ ಇಸ್ಲಾಮಿ ಹಿಂದ್ ಮುಖಂಡ, ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಕೆ.ಎಂ. ಶರೀಫ್ ನಿಧನ

Date:

Advertisements

ಜಮಾಅತೆ ಇಸ್ಲಾಮಿ ಹಿಂದ್‌ ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯರಾಗಿದ್ದ ಮತ್ತು ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಹಿರಿಯ ನಾಯಕ ಕೆ.ಎಂ. ಶರೀಫ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮಂಗಳೂರಿನ ಬಂದರ್ ಸಮೀಪದ ಕಂದಕ್‌ನಲ್ಲಿ ಹುಟ್ಟಿ ಬೆಳೆದ ಇವರು, ಸನ್ಮಾರ್ಗ ವಾರ ಪತ್ರಿಕೆಯ ಸ್ಥಾಪಕರಲ್ಲಿ ಓರ್ವರಾಗಿದ್ದರು. ಇವರು ಸನ್ಮಾರ್ಗ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ಇಬ್ರಾಹೀಮ್ ಸಈದ್ ಅವರ ಅಣ್ಣನಾಗಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಸ್ಥಾನೀಯ ಘಟಕಕ್ಕೆ 20 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಸನ್ಮಾರ್ಗ ಪಬ್ಲಿಕೇಶನ್ ಟ್ರಸ್ಟ್‌ನ ಪ್ರಥಮ ಚೇರ್ಮನ್ ಆಗಿಯೂ ಕರ್ತವ್ಯ ನಿಭಾಯಿಸಿದ್ದರು. 1978ರಲ್ಲಿ ಸನ್ಮಾರ್ಗ ಪತ್ರಿಕೆಯನ್ನು ಪ್ರಾರಂಭಿಸುವುದಕ್ಕೆ ಮತ್ತು ಅದರ ಬೆಳವಣಿಗೆಗೆ ಶಕ್ತಿಮೀರಿ ಪ್ರಯತ್ನಿಸಿದವರಲ್ಲಿ ಇವರು ಒಬ್ಬರಾಗಿದ್ದಾರೆ. ಕೆಲವೇ ಕೆಲವು ಗೆಳೆಯರನ್ನ ಒಟ್ಟು ಸೇರಿಸಿ ಪ್ರತಿಯೊಬ್ಬರೂ ತಲಾ 500 ರೂಪಾಯಿಯಂತೆ ಹೂಡಿಕೆ ಮಾಡಿ ಸನ್ಮಾರ್ಗ ಪತ್ರಿಕೆಯನ್ನು ಸ್ಥಾಪಿಸಲಾಗಿತ್ತು ಮತ್ತು ಅದರ ಹಿಂದಿನ ಚಾಲಕ ಶಕ್ತಿಯಾಗಿ ಗುರುತಿಸಿಕೊಂಡಿದ್ದರು.

Advertisements

ತೊಕ್ಕೊಟ್ಟು ಬಬ್ಬುಕಟ್ಟೆಯಲ್ಲಿರುವ ಹಿರಾ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಚೇರ್ಮೆನ್ ಆಗಿದ್ದ ಇವರು ಸಮರ್ಥ ನಾಯಕತ್ವ, ದೂರ ದೃಷ್ಟಿ ಮತ್ತು ಸಂಘಟನಾ ಚಾತುರ್ಯವನ್ನು ಹೊಂದಿದ್ದರು.

ಇವರು ಪತ್ನಿ, ಐದು ಗಂಡು ಮಕ್ಕಳು ಮತ್ತು ಓರ್ವ ಹೆಣ್ಣು ಮಗಳನ್ನು ಅಗಲಿದ್ದಾರೆ. ಇವರ ಪುತ್ರರಾದ ಅಷ್ಪಾಕ್ ಅಹಮದ್ ಶರೀಫ್ ಅವರು ಈ ಹಿಂದೆ ಎಸ್ಐಒ ರಾಷ್ಟ್ರಾಧ್ಯಕ್ಷರಾಗಿದ್ದರು. ಹಾಗೆಯೇ ಔರಾ ಮಾಸಿಕದ ಸಂಪಾದಕಿಯಾಗಿರುವ ಸಮೀನಾ ಆಫ್ಶಾನ್ ಇವರ ಮಗಳಾಗಿದ್ದಾರೆ. ಸನ್ಮಾರ್ಗದ ಉಪಸಂಪಾದಕರಾಗಿದ್ದ ಮತ್ತು ಉತ್ತಮ ಬರಹಗಾರರಾಗಿಯೂ ಭಾಷಣಗಾರರಾಗಿಯೂ ಗುರುತಿಸಿಕೊಂಡಿರುವ ಬಿ.ಎಸ್. ಶರ್ಫುದ್ದೀನ್ ಇವರ ಅಳಿಯರಾಗಿದ್ದಾರೆ.

ಇದನ್ನು ಓದಿದ್ದೀರಾ? ಶಾಸಕ ರೈ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಗಡೀಪಾರಿಗೆ ಕ್ರಮ: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ

ಕೆ.ಎಂ. ಶರೀಫ್ ಅವರ ನಿಧನಕ್ಕೆ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಅಧ್ಯಕ್ಷ ಬೆಳಗಾಮಿ ಮುಹಮ್ಮದ್ ಸಾದ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ, ಅಕ್ಬರ್ ಅಲಿ ಉಡುಪಿ, ನಗರಾಧ್ಯಕ್ಷ ಕೆ.ಎಂ. ಅಶ್ರಫ್, ಸನ್ಮಾರ್ಗ ಪಬ್ಲಿಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸಯೀದ್ ಇಸ್ಮಾಈಲ್, ಪ್ರಕಾಶಕ ಅಮೀನ್ ಅಹ್ಸನ್, ಅನುಪಮ ಸಂಪಾದಕಿ ಶಹನಾಝ್ ಎಂ, ಮೌಲಾನಾ ಯಹ್ಯಾ ತಂಙಳ್‌ ಮದನಿ ಸಹಿತ ಅನೇಕರು ಸಂತಾಪ ಸೂಚಿಸಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಅಂತಿಮ ಸಂಸ್ಕಾರ ಕಾರ್ಯವು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X