ತುರುವೇಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ : ಸೈನಿಕನ ಮನೆಗೇ ಕನ್ನ ಹಾಕಿದ ಕಳ್ಳರು

Date:

Advertisements

ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಜನತಾ ಕಾಲೋನಿಯ ನಿವಾಸಿಯಾಗಿರುವ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಣ್ಣನವರ ಕುಟುಂಬದವರು ನೆಂಟರ ಮನೆಗೆ ತೆರಳಿದ್ದ ವೇಳೆ ಕಳ್ಳರು ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ ಸುಮಾರು 1.60 ಲಕ್ಷ ರೂಪಾಯಿ ನಗದು ಮತ್ತು 25 ಗ್ರಾಂ ಆಭರಣಗಳ ಕಳವು ಮಾಡಿ ಪರಾರಿಯಾಗಿದ್ದಾರೆ. ಆದರೆ ಮನೆಯಲ್ಲಿದ್ದ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಗಳನ್ನು ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ.

 ದಬ್ಬೇಘಟ್ಟ ಹೋಬಳಿಯ ಮಾವಿನಕೆರೆ ಗ್ರಾಮದಲ್ಲಿ 5 ಮನೆಗಳಿಗೆ ಕಳ್ಳರು ನುಗ್ಗಿದ್ದಾರೆ. ಮಾವಿನಕೆರೆಯ ಮಂಜುನಾಥ್ ಅವರ ಮನೆಯ ಪಕ್ಕದ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಜಯಶಂಕರ್ ರವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 80 ಸಾವಿರ ರೂ ನಗದು ಕಳವು ಮಾಡಿದ್ದಾರೆ. ಮನೆಗೆ ಬೀಗ ಹಾಕಿದ್ದ ಅದೇ ಗ್ರಾಮದ ಈಶ್ವರ್ ಎಂಬುವವರ ಮನೆಯ ಬೀಗ ಮುರಿದು ಮನೆ ನುಗ್ಗಲು ಪ್ರಯತ್ನಿಸಿದ್ದಾರೆ. ಆದರೆ ಅದು ವಿಫಲವಾಗಿದೆ. ಲಿಂಗಮ್ಮ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಒಂದುವರೆ ಸಾವಿರ ರೂಗಳನ್ನು ಕದ್ದಿದ್ದಾರೆ. ನಂತರ ಬ್ಯಾಡರಹಳ್ಳಿಯ ರಾಜಣ್ಣ ಎಂಬುವವರಿಗೆ ಸೇರಿದ ಬೈಕ್ ನ್ನು ಕದ್ದಿದ್ದರು. ಆದರೆ ಬೈಕ್ ನಲ್ಲಿ ಪೆಟ್ರೋಲ್ ದಾರಿ ಮಧ್ಯೆ ಖಾಲಿಯಾದ ಕಾರಣ ಊರ ಹೊರಗಿನ ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದಾರೆ. 

Advertisements

 ನಂತರ ಅರಳಹಳ್ಳಿಯಲ್ಲಿ ಬೀಗ ಹಾಕಿದ್ದ ಮನೆಯ ಬೀಗ ಮುರಿದಿದ್ದಾರೆ. ಆದರೆ ಮನೆಗೆ ನುಗ್ಗಲು ಸಾಧ್ಯವಾಗಿಲ್ಲ. ಒಟ್ಟಾರೆ ಈ ಮರ‍್ನಾಲ್ಕು ಗ್ರಾಮಗಳಲ್ಲಿ ಬೀಗ ಹಾಕಲಾಗಿದ್ದ ಮನೆಗಳನ್ನೇ ಕಳ್ಳರು ಟಾರ್ಗೆಟ್ ಮಾಡಿದ್ದಾರೆ.  ಕಳ್ಳತನ ಮಾಡಿರುವ ಖದೀಮರು ಕಪ್ಪು ಬಟ್ಟೆಯನ್ನು ಧರಿಸಿರುವುದು ಮತ್ತು ಮೂವರು ಕಳ್ಳತನ ಮಾಡಲು ಬಂದಿರುವುದು ಮಾಯಸಂದ್ರದ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

 ಮನೆಯಲ್ಲಿ ಕಳ್ಳತನ ಮಾಡಿರುವ ಸಂಬಂಧ ಯೋಧರಾದ ಶಿವಣ್ಣನವರ ಪತ್ನಿ ಶಶಿಕಲಾ  ತುರುವೇಕೆರೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಕಳ್ಳತನವಾಗಿರುವ ಸ್ಥಳಗಳಿಗೆ ಸಿಪಿಐ ಲೋಹಿತ್, ಎಸ್ ಐ ಸಂಗಮೇಶ್ ಮೇಟಿ ಭೇಟಿ ನೀಡಿದ್ದರು. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಗಳಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಪೋಲಿಸರು ಕಳ್ಳರನ್ನು ಪತ್ತೆ ಹಚ್ಚಿ ಸಾರ್ವಜನಿಕರ ಆತಂಕವನ್ನು ದೂರಮಾಡಬೇಕೆಂದು ಮಾವಿನಕೆರೆ ಗ್ರಾಮದ ಮಂಜಣ್ಣ ಒತ್ತಾಯಿಸಿದ್ದಾರೆ.

ವರದಿ – ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X