ಬೀದರ್‌ | ಜಿಲ್ಲೆಯಲ್ಲಿ ತೀವ್ರ ಬರ; ನೀರಿಗಾಗಿ ತೆಲಂಗಾಣಕ್ಕೆ ಹೊರಟ ತಾಂಡಾ ಜನರು

Date:

ಬೀದರ್‌ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿದಂತೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಮುಂಗಾರು-ಹಿಂಗಾರು ಮಳೆ ದೊಡ್ಡ ಪ್ರಮಾಣದಲ್ಲಿ ಕೈಕೊಟ್ಟ ಪರಿಣಾಮ ಕೆರೆ, ಕಟ್ಟೆ, ಬಾವಿ, ಕೊಳ್ಳಗಳೆಲ್ಲ ಬತ್ತಿವೆ. ಅಂತರ್ಜಲ ಮಟ್ಟ ಪಾತಾಳ ಸೇರಿದೆ.

ಜಿಲ್ಲೆಯ 120 ಕ್ಕೂ ಅಧಿಕ ಗ್ರಾಮಗಳಲ್ಲಿ ಜಲಕ್ಷಾಮದ ಆತಂಕ ಎದುರಾಗಿದೆ. ಅದರಲ್ಲೂ ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಕೆಲವೆಡೆ ಗ್ರಾಮ, ತಾಂಡಾಗಳಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಬೇಸಿಗೆ ಆರಂಭದಲ್ಲೇ ನೀರಿನ ಬವಣೆ ತಲೆದೋರಿದೆ. ಮಹಿಳೆಯರು, ಮಕ್ಕಳು ಪ್ರತಿನಿತ್ಯವೂ ನೀರಿಗಾಗಿ ಹೊಲ, ಗದ್ದೆಗಳಿಗೆ ಅಲೆದಾಡುತ್ತಿದ್ದಾರೆ.

ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ ತಾಲೂಕಿನ ವಿಜಯನಗರ ತಾಂಡಾ (ಬಾರ್ಡರ್)ದಲ್ಲಿ ಕಳೆದ ಎರಡು ವರ್ಷಗಳಿಂದ ನೀರಿನ ಕೊರತೆ ಇದೆ. ಆದರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ತಾಂಡಾ ನಿವಾಸಿಗಳು ಹಿಡಿಶಾಪ ಹಾಕುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೀರಿಗಾಗಿ ತೆಲಂಗಾಣದತ್ತ ಹೊರಟ ಜನರು:

ಜಂಬಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ವಿಜಯನಗರ ತಾಂಡಾದಲ್ಲಿ ಪ್ರತಿ ಬೇಸಿಗೆ ವೇಳೆ ಮಾತ್ರ ನೀರಿನ ಸಮಸ್ಯೆ ಇಲ್ಲ. ಮಳೆಗಾಲ, ಚಳಿಗಾಲದಲ್ಲೂ ನೀರಿನ ಸಮಸ್ಯೆ ಇದ್ದೇ ಇದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದ ಕಾರಣದ 2 ಕಿ.ಮೀ. ಅಂತರದಲ್ಲಿರುವ ಪಕ್ಕದ ತೆಲಂಗಾಣ ರಾಜ್ಯದ ಖರಸಗುತ್ತಿ ಗ್ರಾಮದಿಂದ ನೀರು ತರುವುದು ನಮಗೆ ರೂಢಿಯಾಗಿದೆ ಎಂಬುದು ತಾಂಡಾ ನಿವಾಸಿಗಳು ಅವಲತ್ತುಕೊಳ್ಳುತ್ತಾರೆ.

ತಾಂಡಾದಲ್ಲಿ ಸುಮಾರು 200 ಕ್ಕೂ ಅಧಿಕ ಮನೆಗಳಿವೆ, ಬಹುತೇಕರು ಜಾನುವಾರು ಸಾಕಾಣಿಕೆ ಉದ್ಯೋಗ  ಸೇರಿದಂತೆ ಕೃಷಿ ಕಾರ್ಮಿಕರಿದ್ದಾರೆ. ಆದರೆ ತೀವ್ರವಾಗಿ ಕಾಡುತ್ತಿರುವ ನೀರಿನ ಸಮಸ್ಯೆಯಿಂದ ಜನರಿಗೆ ದಿಕ್ಕುದೋಚದಂತಾಗಿದ್ದು, ಹಗಲಿರುಳು ನೀರು ಎಲ್ಲಿಂದ ತರುವುದು ಎಂಬುದೇ ಚಿಂತೆಯಾಗಿದೆ.

ಹಳ್ಳ  ಹಿಡಿದ ಜೆಜೆಎಂ :

ಬಳಕೆಯಾಗದೇ ಪಾಳು ಬಿದ್ದ ಜೆಜೆಂ ಯೋಜನೆಯಲ್ಲಿ ಅಳವಡಿಸಿದ ನೀರಿನ ನಳ

ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಜಲ ಜೀವನ್ ಮಿಷನ್ (ಜೆಜೆಂ) ಯೋಜನೆಯಡಿ ವಿಜಯನಗರ ತಾಂಡಾದಲ್ಲಿ ಕಾಮಗಾರಿ ಏನೋ ಪೂರ್ಣಗೊಂಡಿದೆ. ಆದರೆ ಜೆಜೆಂ ಯೋಜನೆಯ ನಲ್ಲಿಯಲ್ಲಿ ನೀರು ಯಾವಾಗ ಬರುತ್ತದೆ ಎಂದು ಬಾಯ್ತೆರೆದು ಕಾದು ಕುಳಿತುಕೊಳ್ಳುವಂತಾಗಿದೆ.

ತಾಂಡಾ ಜನರಿಗೆ ಆಸರೆ ಒಂದೇ ಕೊಳವೆ ಬಾವಿ :

“ವಿಜಯನಗರ ತಾಂಡಾದಲ್ಲಿ ಇರುವ ಎರಡು ಕೊಳವೆ ಬಾವಿಗಳ ಪೈಕಿ ಒಂದು ಬತ್ತಿ ಹೋಗಿದೆ. ಒಂದರಲ್ಲಿ ಸ್ವಲ್ಪ ನೀರು ಬರುತ್ತದೆ, ಅದು ತಾಂಡಾದ ಸುಮಾರು 1,500 ಕ್ಕೂ ಅಧಿಕ ಜನಸಂಖ್ಯೆಗೆ ಸಾಕಾಗುತ್ತಿಲ್ಲ. ಹೀಗಾಗಿ ಬೇರೆಯವರ ಹೊಲದಲ್ಲಿರುವ ಬೋರವೆಲ್‌ಗೆ ಹೋಗಿ ಬೇಡಿಕೊಂಡ ನೀರು ತರುತ್ತಿದ್ದೇವೆ. ದ್ವಿಚಕ್ರ ವಾಹನ ಇದ್ದವರು ಪಕ್ಕದ ತೆಲಂಗಾಣ ರಾಜ್ಯದ ಗ್ರಾಮದಿಂದ ನೀರು ತರಬೇಕಾದ ಪರಿಸ್ಥಿತಿ ಎದುರಾಗಿದೆ. ಅಲ್ಲಿಯೂ ಅವರು ಬೈದು ಓಡಿಸುತ್ತಿದ್ದಾರೆ” ಎನ್ನುತ್ತಾರೆ ತಾಂಡಾ ಜನರು.

“ನೀರಿನ್ ಸಲೇಕ್‌ ಬೇಗನಾ ರಾತ್ರಿ ಇಲ್ಲೇ ಮಕೊಲಾತಿದೆವ್‌, ಪೂರಾ ತಾಂಡಾ ಮಂದಿಗಿ ಒಂದೇ ಬೋರ್‌ ದಿಕ್ಕದಾ, ಅದೂಕ್ಬಿ ನೀರ್‌  ಬರಲುವ್‌, ಮುಂಜಾನಿ, ಸಂಜಿಗಿ ತೋಡೆ ಬರ್ತಾವ್‌, ಅದ್ಕೆ ನಂಗಾ-ನಿಂಗಾ ಅಂತ ನೀರಿನ ಸಲೇಕ್‌ ಎಲ್ಲೋರ್‌ ಝಗ್ಡಾ ಆಡ್ಕೊಂಡಿ ಹೊಡ್ಕೊಲತಾವ್‌, ನಮ್‌ ಕಷ್ಟ ಯಾರ್‌ ನೋಡಲುವ್‌, ನಾವ್ ನೀರಿನ ಕಡೆದ್ ಸತ್ತಿ ಬದ್ಕಲತಿದೇವ್‌‌, ಖರೇ ಯಾರ್ಬೀ ನಮ್‌ ಗೋಳು ಕೇಳಲುರ್” ಅಂತ ತಾಂಡಾದ ಮಹಿಳೆಯೊಬ್ಬರು ಈದಿನ.ಕಾಮ್‌ ದೊಂದಿಗೆ ಮಾತನಾಡಿ ಗೋಳು ತೋಡಿಕೊಂಡರು.

“ನಮ್ಮ ತಾಂಡಾದಲ್ಲಿ ನೀರಿನ ಸಮಸ್ಯೆ ಬಹಳ ಇದೆ, ಶಾಲಾ ಕಾಲೇಜಿಗೆ ಹೋಗುವ ಮಕ್ಕಳು, ಮಹಿಳೆಯರು, ವೃದ್ಧರು ನೀರಿಗಾಗಿ ರಾತ್ರಿ ನಿದ್ದೆ ಮಾಡ್ತಾ ಇಲ್ಲ. ಒಂದೇ ಬೋರ್‌ವೆಲ್ ಇದೆ, ಅದಕ್ಕೂ ಸ್ವಲ್ಪ ನೀರು ಬರ್ತಾವೆ. ನಮಗೆ ಹೊಸ ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯತ್‌ ಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು” ಎಂದು ತಾಂಡಾ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಈ ಬಗ್ಗೆ ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ದಿಲೀಪ್ ಬದೋಲೆ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಬೇಸಿಗೆ ಕಾಲದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲ ತಾಲೂಕು ಮಟ್ಟದಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಔರಾದ ತಾಲೂಕಿನ ವಿಜಯನಗರ ತಾಂಡಾದಲ್ಲಿನ ನೀರಿನ ಸಮಸ್ಯೆ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತರುತ್ತೇನೆ” ಎಂದು ಹೇಳಿದರು.

ಬಾಲಾಜಿ ಕುಂಬಾರ್
+ posts

ಕವಿ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಕವಿ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....