ಉಡುಪಿ | ಸಿಜೆಐ ಗವಾಯಿ ಮೇಲಿನ ದಾಳಿ, ಕೇವಲ ವ್ಯಕ್ತಿಯ ಮೇಲೆ ಅಲ್ಲ, ಸಂವಿಧಾನದ ಮೇಲಿನ ದಾಳಿ : ಶಾಮ್ ರಾಜ್ ಬಿರ್ತಿ

Date:

Advertisements

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಕಾರ್ಯ ನಡೆಯುತ್ತಿದ್ದ ವೇಳೆ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ತೀವ್ರ ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದು ಕೇವಲ ವ್ಯಕ್ತಿಯ ಮೇಲಿನ ದಾಳಿ ಅಲ್ಲ, ಭಾರತದ ಸಂವಿಧಾನದ ಮೇಲಿನ ನೇರ ದಾಳಿ. ಸನಾತನಿಗಳು ಸ್ವಾತಂತ್ರ್ಯ ದೊರೆತ ಕ್ಷಣದಿಂದಲೂ ಸಂವಿಧಾನವನ್ನು ವಿರೋಧಿಸುತ್ತಾ, ಮನುಸ್ಮೃತಿ ಆಧಾರಿತ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು ಯತ್ನಿಸುತ್ತಿದ್ದಾರೆ. ಇದೇ ಮನೋಭಾವದಿಂದ ಇಂತಹ ಅಘಾತಕಾರಿ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅಹಿಂಸಾವಾದಿ ಮಹಾತ್ಮ ಗಾಂಧಿಯವರನ್ನೇ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಗೆ ಈ ಸನಾತನಿಗಳು ದೇವರ ಸ್ಥಾನ ನೀಡುತ್ತಾರೆ. ಇಂತಹ ಮನೋಭಾವ ಹೊಂದಿರುವವರು ದಲಿತ ಮೂಲದ ನ್ಯಾಯಮೂರ್ತಿ ಗವಾಯಿ ಅವರ ಪೀಠದಲ್ಲಿ ಕೂತು ನ್ಯಾಯ ನೀಡುವುದನ್ನೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇದು ಅವರ ಹಿಂದುತ್ವವಾದಿ, ವೈದಿಕಶಾಹಿ ಮನೋಭಾವದ ಪ್ರತಿಬಿಂಬ ಎಂದು ಕಿಡಿ ಕಾರಿದ್ದಾರೆ.

ಅಖಂಡ ಭಾರತ, ಸಂಸ್ಕೃತಿ, ಸಂಪ್ರದಾಯಗಳ ಹೆಸರಿನಲ್ಲಿ ಬಡಾಯಿ ಹೊಡೆಯುವ ಇಂತಹ ಸನಾತನವಾದಿಗಳ ಹೇಯ ಅಂತರಂಗವನ್ನು ಈ ಘಟನೆ ಬಯಲುಗೊಳಿಸಿದೆ. ಸಂವಿಧಾನದ ಆಶಯಗಳ ಮೇಲೆ ದಾಳಿ ನಡೆಸುವ ಇಂಥ ದೇಶದ್ರೋಹಿಗಳನ್ನು ಯುಎಪಿಎ ಕಾಯ್ದೆಯಡಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ...

Download Eedina App Android / iOS

X