ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

Date:

Advertisements

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಇಂದು ಅವರ ಮನೆಗೆ ಕರೆದೊಯ್ದ ಬಳಿಕ ಕೆಲಹೊತ್ತಿನಲ್ಲಿ ವಿಧಿವಶರಾದರು.

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರೆಸಿಕೊಂಡು ಬರುತ್ತಿದೆ. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಅದನ್ನು ದಾಸೋಹ ಜೊತೆಗೆ ಕಲಬುರಗಿಯಲ್ಲಿ ಶರಣಬಸವೇಶ್ವರ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಶಾಲಾ-ಕಾಲೇಜುಗಳ ಸ್ಥಾಪಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರುವಾಸಿಯಾಗಿದ್ದರು.

Advertisements

ಅವರಿಗೆ ಪತ್ನಿ ದಾಕ್ಷಾಯಣಿ ಅಪ್ಪ, ಮೂವರು ಪುತ್ರಿಯರು, ಪುತ್ರ ಸಂಸ್ಥಾನದ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಇದ್ದಾರೆ.

ಶರಣಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿಯೇ ಶರಣಬಸಪ್ಪ ಅಪ್ಪಾ ಅವರ ಅಂತ್ಯಸಂಸ್ಕಾರವನ್ನು ಶುಕ್ರವಾರ ಸಂಜೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ.  ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ಕುಟುಂಬಸ್ಥರ ಜೊತೆ ಸಮಾಲೋಚನೆ‌ ನಡೆಸಿ ತಿಳಿಸಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಹೇಳಿದರು.

ಇದನ್ನೂ ಓದಿ : ಬೀದರ್ | ಒಪ್ಪೊದಿಲ್ಲ, ಒಪ್ಪೊದಿಲ್ಲ ನಾಗಮೋಹನದಾಸ್ ವರದಿ ಒಪ್ಪೊದಿಲ್ಲ : ಬೃಹತ್‌ ಪ್ರತಿಭಟನಾ ರ್‍ಯಾಲಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X