ಉಡುಪಿ | ಅಂತರ್ ಧರ್ಮಿಯ ಮದುವೆಗಳ ಬಗ್ಗೆ ದುರುದ್ದೇಶಪೂರಿತ ಅಪಪ್ರಚಾರ ಸಲ್ಲದು

Date:

Advertisements

ದೇಶದಲ್ಲಿ ಅಂತರ್ ಧರ್ಮಿಯ ಮದುವೆಗಳು ಸಾಮಾನ್ಯವಾಗಿ ನಿರಂತರ ನಡೆಯುತ್ತವೆ. ಮುಸ್ಲಿಂ ಹೆಣ್ಣುಮಕ್ಳಳೂ ಕೂಡ ಅವರ ಇಚ್ಚಾನುಸಾರವಾಗಿ ಹಿಂದು ಮತ್ತು ಕ್ರಿಸ್ಟಿಯನ್ ಹುಡುಗರ ಜೊತೆ ಮದುವೆ ಆಗುವುದೂ ಇದೆ. ಬಲಾತ್ಕಾರವಾಗಿ ಇಂತಹ ಘಟನೆಗಳು ನಡೆದರೆ ಅದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದು ಅರ್ಥದಲ್ಲಿ ಹುಡುಗಿಯ ಅಥವಾ ಮನೆಯವರ ಒಪ್ಪಿಗೆ ಇಲ್ಲದೆ ಮದುವೆ ಆಗುವುದು ಸಹ ಸಮಾಜಕ್ಕೆ ಆರೋಗ್ಯಕರ ಬೆಳವಣಿಗೆ ಅಲ್ಲ, ಇಂತಹ ಪ್ರಕರಣಗಳಲ್ಲಿ ಪೋಷಕರು ಹೆಣ್ಣು ಮಕ್ಕಳ ಮನವೊಲಿಸಿ ಅವರನ್ನು ವಾಪಾಸು ಮನೆಗೆ ಕಳಿಸುವ ಪ್ರಯತ್ನ ಮಾಡುವುದು ಒಳ್ಳೆಯದು, ಇನ್ನು ಉಡುಪಿಯಲ್ಲಿ ನಡೆದ ಅಂತರ್ ಜಾತಿಯ ಪ್ರೇಮ ಪ್ರಕರಣದಲ್ಲಿ ಅಂತಹ ಯಾವುದೇ ವಿಷಯ ಅಥವಾ ಸಂಘ ಪರಿವಾರದವರು ಹೇಳುವ ರೀತಿಯ ಲವ್ ಜಿಹಾದ್ ಎಂಬ ಯಾವುದೇ ಕಪೋಲಕಲ್ಪಿತ ಸಂಚು ನಡೆದಿಲ್ಲ. ಆ ಹೆಣ್ಣುಮಗಳು, ತನ್ನ ಒಪ್ಪಿಗೆಯ ಮೇರೆಗೆ ಹುಡುಗನೊಂದಿಗೆ ಹೋಗಿದ್ದಾಳೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಅದೂ ಅಲ್ಲದೆ, ಈ ವಿಷಯ ಹೈಕೋರ್ಟ್ ನಲ್ಲಿ ಇರುವುದರಿಂದ ಕೋರ್ಟ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ಅದನ್ನು ಗೌರವಿಸಬೇಕು.ಅದನ್ನು ಬಿಟ್ಟು ರಾಜಕೀಯ ಲಾಭ ಪಡೆಯಲು ಸಂಘ ಪರಿವಾರ ಮತ್ತು ಬಿಜೆಪಿ ಮುಸ್ಲಿಂ ವಿರೋಧಿ ಕಥೆಗಳನ್ನು ಕಟ್ಟಿ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಕಾರ್ಯ ಕೈಬಿಡಬೇಕು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X