ಮೈಸೂರು | ನಟನ ರಂಗಶಾಲೆಯಲ್ಲಿ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘

Date:

Advertisements

ಮೈಸೂರಿನ ನಟನ ರಂಗಶಾಲೆಯಲ್ಲಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘ ನಾಟಕವನ್ನು ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ವೀಕ್ಷಿಸಿದರು.

ಬೇಲೂರು ರಘುನಂದನ್‌ ವಿರಚಿತ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿರುವ ಹಿರಿಯ ನಟಿ ಉಮಾಶ್ರೀ ಅವರ ಅಭಿನಯದ “ಶರ್ಮಿಷ್ಠೆ” ನಾಟವನ್ನು ವೀಕ್ಷಿಸಿ ಮಾತನಾಡಿದ ಸಚಿವ ಮಹದೇವಪ್ಪ ಬಹುಮುಖ ಪ್ರತಿಭೆ ಉಮಾಶ್ರೀ ಅವರ ಭಾವಪೂರ್ಣವಾದ ಅಭಿನಯ ನಮ್ಮೆನ್ನೆಲ್ಲ ಒಂದು ಗಂಟೆ ಕಾಲ ಭಾವಪರವಶಗೊಳಿಸಿದೆ. ಇಬ್ಬರು ಪರಮಾಪ್ತ ಸ್ನೇಹಿತರ ವಿಭಿನ್ನವಾದ ನಡೆ, ನುಡಿಗಳು ಹಾಗೂ ಸಂಘರ್ಷದ ಸನ್ನಿವೇಶಗಳ ಮನೋಜ್ಞವಾದ ನಟನೆ ನಿಜಕ್ಕೂ ಪ್ರಶಂಸನೀಯ ಎಂದರು.

ಕಷ್ಟದ ದಿನಗಳಿಂದ ಬೆಳೆದು ಬಂದಿರುವ ಉಮಾಶ್ರೀ ಅವರು ಜೀವನದ ಅನೇಕ ಮಜಲುಗಳನ್ನು ಹತ್ತಿರದಿಂದ ಕಂಡಿದ್ದಾರೆ. ನಾಟಕದಲ್ಲೂ ಕೂಡ ಎಲ್ಲಿಯೂ ಏರಿಳಿತಗಳಿಲ್ಲದೆ ಅತ್ಯುತ್ತಮವಾಗಿ ಏಕಪಾತ್ರದಲ್ಲಿ ಅಭಿನಯಿಸಿ ಪಾತ್ರಕ್ಕೆ ಜೀವತುಂಬಿದ್ದಾರೆ. ಅವರ ಅಪ್ರತಿಮಾ ಕಲಾ ಪ್ರತಿಭೆಯನ್ನು ಈ ನಾಟಕದ ಮೂಲಕ ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

ರಾಜಕೀಯದಲ್ಲಿಯೂ ಕೂಡ ಮಹಿಳಾ ಮತ್ತು ಮಕ್ಕಳ ಸಚಿವೆಯಾಗಿ ಮಹಿಳಾ ಪರವಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರ ಬಗ್ಗೆ ಆಸಕ್ತಿವಹಿಸಿ ಅನೇಕ ಕೊಡುಗೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕೂಡ ಚಳುವಳಿಯ ಮೂಲಕ ತಮ್ಮ ಜವಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ರಂಗಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಂದೇಶಗಳನ್ನು ಸಾರುವ ಮೂಲಕ ಮಹತ್ತರವಾದ ಬದಲಾವಣೆಯನ್ನು ಜಾರಿಮಾಡುವಂತಹ ವೇದಿಕೆಗಳಾಗಿವೆ. ಇಂತಹ ಕೆಲಸಗಳಿಗೆ ಪ್ರೇರಕ ಶಕ್ತಿಯಾಗಿ ಉಮಾಶ್ರೀ ಹಾಗೂ ಮಂಡ್ಯ ರಮೇಶ್ ಅವರಂತಹ ಕಲಾವಿದರ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X