ಶಿಗ್ಗಾವಿ ಉಪಚುನಾವಣೆ | ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು: ಸಿಪಿಐಎಂ ಕರೆ

Date:

Advertisements

ಕೋಮುವಾದಿ ಬಿಜೆಪಿ ಪಕ್ಷವು ಜನರ ಏಳಿಗೆಗಾಗಿ ಕೆಲಸ ಹಾಗೂ ರಾಜಕಾರಣ ಮಾಡುವ ಬದಲಿಗೆ ಜನರ ಐಕ್ಯತೆ ಸಾಮರಸ್ಯ ಒಡೆಯುವ ಕೋಮು ವಿಭಜಕ ರಾಜಕಾರಣವನ್ನು ಮಾಡುತ್ತಿದೆ. ಇದು ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಸಿಪಿಐ(ಎಂ) ಹಾವೇರಿ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಪೂಜಾರ್ ಕರೆ ನೀಡಿದರು.

ಹಾವೇರಿ ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿಯು ಶಿಗ್ಗಾಂವಿ -ಸವಣೂರು ಉಪ ಚುನಾವಣೆಯಲ್ಲಿ ಕೋಮುವಾದಿ ಪಕ್ಷ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಎಂದು ನಡೆಸುತ್ತಿರುವ ಅಭಿಯಾನದಲ್ಲಿ ಅವರು ಮಾತನಾಡಿದರು.

“ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ದುಡಿಯುವ ಜನರು ಹಾಗೂ ಎಲ್ಲ ನಾಗರಿಕರನ್ನು ತೀವ್ರ ಸಂಕಷ್ಠಕ್ಕೀಡು ಮಾಡಿತ್ತು. ಲೂಟಿಕೋರ ಕಾರ್ಪೋರೇಟ್ ಸಂಸ್ಥೆಗಳ ಪರವಾದ ಆರ್ಥಿಕ ನೀತಿಗಳನ್ನು ಅನುಸರಿಸುತ್ತಿವೆ. ಈ ಲೂಟಿಕೋರರ ಲೂಟಿಗೆ ವಿರುದ್ಧವಾಗಿ ನಡೆಯುವ ಪ್ರತಿರೋಧವನ್ನು ಹತ್ತಿಕ್ಕಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ” ಎಂದರು.

Advertisements
1002329064

“ಪ್ರಸಕ್ತ ಚುನಾವಣೆಯಲ್ಲಿ ಕಳೆದ ನಾಲ್ಕು ಅವಧಿಯಿಂದ ಬಿಜೆಪಿಯಿಂದ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿ ಕೆಲಸ ಮಾಡಿಲ್ಲ. ಕಳೆದ ಅವಧಿಯಲ್ಲಿ ರಾಜ್ಯ ಸರಕಾರದಲ್ಲಿ ನೀರಾವರಿ ಮಂತ್ರಿ, ಗೃಹ ಮಂತ್ರಿ ಹಾಗೂ ಮುಖ್ಯಮಂತ್ರಿಯೂ ಆಗಿ ಅಧಿಕಾರ ನಡೆಸಿದರೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ. ಈ ಪ್ರದೇಶದ ರೈತ ಕಾರ್ಮಿಕರು ಹಾಗೂ ದುಡಿಯುವ ಜನರ ಬವಣೆಗಳು ಪರಿಹಾರ ಕಾಣಲಿಲ್ಲ. ಶಿಕ್ಷಣ ಉದ್ಯೋಗದ ಸಮಸ್ಯೆಗಳು ಬಿಗಡಾಯಿಸಿ ವಿದ್ಯಾರ್ಥಿ-ಯುವಜನರು, ಮಹಿಳೆಯರು ಬೇಸತ್ತಿದ್ದಾರೆ. ಇದೀಗ ಹಣ ಬಲದಿಂದ ಉಪಚುನಾವಣೆಗೆ ತಮ್ಮ ಮಗ ಉದ್ಯಮಿ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿಯ ಅಭ್ಯರ್ಥಿಯನ್ನಾಗಿಸಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ” ಎಂದು ಬಸವರಾಜ್ ಪೂಜಾರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಉಪ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದ ಸೌಹಾರ್ದತೆ ಹಾಗೂ ಜನರ ಬದುಕು ಹಸನಾಗಿಸಲು ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ನಿರ್ಣಾಯಕವಾಗಿ ಸೋಲಿಸುವುದು ಅಗತ್ಯವಾಗಿದೆ. ಬಿಜೆಪಿಯನ್ನು ಸೋಲಿಸಲು ಶಕ್ತವಾದ ಕಾಂಗ್ರೆಸ್ ಪಕ್ಷ ಬಿಟ್ಟರೆ ಅನ್ಯರಿಲ್ಲದ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಸಿಪಿಐಎಂ ಪಕ್ಷವು ಮತದಾರರಲ್ಲಿ ಮನವಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X