ಶಿಕಾರಿಪುರ | ನಕಲಿ ಚಿನ್ನದ ನಾಣ್ಯ ನೀಡಿ ಲಕ್ಷಾಂತರ ರೂ ಹಣ ಪೀಕಿದ್ದ ಆರೋಪಿ ಬಂಧನ

Date:

Advertisements

ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ಲಕ್ಷಾಂತರ ರೂ ಹಣ ದೋಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ. ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಾಳಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.

ನಕಲಿ ಚಿನ್ನದ ನಾಣ್ಯ ಮಾರಾಟ ಪ್ರಕರಣಗಳಲ್ಲಿ ಕಳ್ಳರು ಪತ್ತೆಯಾಗೋದೇ ಅಪರೂಪ. ಅಂಥದ್ದರಲ್ಲಿ ಶಿರಾಳಕೊಪ್ಪ ಪಿಎಸ್ಐ ಪ್ರಶಾಂತ್ ನಡೆಡಸಿದ ಕಾರ್ಯಾಚರಣೆಯಲ್ಲಿ ಈ ಅಪರೂಪದ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಡಿಸೆಂಬರ್‌ 29ರಂದು ಹಾಸನ ಮೂಲದ ಕಲ್ಲೇಶ್‌ ಎಂಬುವವರಿಗೆ ಧರ್ಮಸ್ಥಳದಲ್ಲಿ ಚಂದ್ರು ಎಂಬ ವ್ಯಕ್ತಿಯ ಪರಿಚಯವಾಗಿದೆ. ಶಆತ ಜನವರಿ 06 ರಂದು ಕಲ್ಲೇಶ್‌ಗೆ ಕರೆ ಮಾಡಿ, ಮನೆ ಪಕ್ಕದ ಜಾಗದಲ್ಲಿ 3 ಕೆಜಿ ಬಂಗಾರದ ನಾಣ್ಯಗಳು ಸಿಕ್ಕಿರುತ್ತವೆ. ಅವುಗಳನ್ನು ಮಾರಾಟ ಮಾಡಬೇಕಿದೆ ಎಂದು ಹೇಳಿದ್ದಾನೆ. ಆತನ ಮಾತು ನಂಬಿ ಕಲ್ಲೇಶ್‌, ಶಿರಾಳಕೊಪ್ಪಕ್ಕೆ ಬಂದು, ಚಂದ್ರು ಮತ್ತು ನವೀನ್ ಇಬ್ಬರು ಸೇರಿ ನೀಡಿದ ಒಂದು ಬಂಗಾರದ ನಾಣ್ಯ ಪಡೆದಿದ್ದಾನೆ. ಊರಿಗೆ ಹಿಂತಿರುಗಿ ಪರಿಶೀಲಿಸಿದಾಗ ಅದು ಅಸಲಿ ಚಿನ್ನದ ನಾಣ್ಯವಾಗಿತ್ತು. ಬಳಿಕ ಜನವರಿ 08 ರಂದು ಶಿರಾಳಕೊಪ್ಪಕ್ಕೆ ಬಂದು ಚಂದ್ರು ಮತ್ತು ನವೀನ್ ಇಬ್ಬರಿಗೆ ಐದು ಲಕ್ಷ ಹಣ ನೀಡಿ ಅವರಿಂದ 800 ಗ್ರಾಂ ತೂಕದ ನಾಣ್ಯಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷಿಸಲಾಗಿ ಅವು ನಕಲಿ ಎಂದು ತಿಳಿದು ಬಂದಿದ್ದು, ತಾನು ಮೋಸ ಹೋಗಿರುವುದಾಗಿ ಕಲ್ಲೇಶ್‌ಗೆ ಅರಿವಾಗುತ್ತದೆ.

Advertisements

ಈ ಸುದ್ದಿ ಓದಿದ್ದೀರಾ?: ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

1001187051

ಕುಪಿತಗೊಂಡ ಕಲ್ಲೇಶ್‌, ತನಗೆ ಬಂಗಾರದ ನಾಣ್ಯಗಳೆಂದು ಸುಳ್ಳು ಹೇಳಿ ನಕಲಿ ನಾಣ್ಯ ನೀಡಿ ಹಣವನ್ನು ಪಡೆದು ಮೋಸ ಮಾಡಿದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತಾರೆ. ಕೇಸ್‌ ಕೈಗಿತ್ತಿಕೊಂಡ ಪೊಲೀಸರ ತಂಡ ಜನವರಿ 29 ರಂದು ಸೊರಬ ತಾಲೂಕು ತತ್ತೂರು ಗ್ರಾಮದ ಆರೋಪಿ ಚಂದ್ರಪ್ಪ (48)ನನ್ನು ಬಂಧಿಸಿದೆ. ಆರೋಪಿಯಿಂದ ಪ್ರಕರಣ ಸಂಬಂಧ ರೂ 5,00,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X