ಶಿಕಾರಿಪುರ ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ನಡೆದಿದೆ.
ಜೈನುಲ್ಲಾ ಬಿನ್ ಇಬ್ರಾಹಿಂ (26), ಕೋಯಲ್ (18) ಮೃತಪಟ್ಟ ಸಹೋದರರು.ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಮೂವರು ತಾಲ್ಲೂಕಿನ ಬಳ್ಳಿಗಾವಿ ಗ್ರಾಮದವರು.
ಕೆಲಸದ ನಿಮಿತ್ತ ಬಾಣಾವರಕ್ಕೆ ತೆರಳಿ ವಾಪಸಾಗುವ ಸಂದರ್ಭದಲ್ಲಿ ಅಪಘಾತ ನಡೆದಿದೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.