ಶಿವಮೊಗ್ಗ | ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು: ಆರಗ ಜ್ಞಾನೇಂದ್ರ

Date:

Advertisements

ಸಂವಿಧಾನದ ನಾಲ್ಕನೇ ಅಂಗವೆಂದು ಪತ್ರಿಕೋದ್ಯಮವನ್ನು ಗುರುತಿಸುತ್ತೇವೆ. ಜನಪ್ರತಿನಿಧಿಗಳು ಕೊಡುವ ಹೇಳಿಕೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿ, ಜನರ ಬಾಯಲ್ಲಿ ಬಂದರೆ ಸಾಕು ಸಂತೋಷವಾಗುತ್ತದೆ. ಅಂತೆಯೇ, ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪತ್ರಿಕೋದ್ಯಮ ಬಹಳ ದೊಡ್ಡದಾಗಿ ಬೆಳೆದಿದೆ. ಹಲವು ಪತ್ರಿಕೆಗಳು ದೊಡ್ಡ ಕೊಡುಗೆಯನ್ನು ನೀಡುತ್ತಿವೆ. ಪತ್ರಿಕಾರಂಗ ಲಾಭ ಮಾಡುವ ಹುದ್ದೆಯಲ್ಲ. ಇಲ್ಲಿ ಅಡ್ಡದಾರಿ ಹಿಡಿದು ಕೆಲಸ ಮಾಡುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

“ಭ್ರಷ್ಟಾಚಾರ ಮಾಡಿದವರ ಬಗ್ಗೆ ಸುದ್ದಿ ಮಾಡುವುದಕ್ಕೂ, ಮಾಡದೇ ಇರುವವನ ಬಗ್ಗೆ ಸುದ್ದಿ ಮಾಡುವುದಕ್ಕೂ ವ್ಯತ್ಯಾಸವಿದೆ. ಪತ್ರಿಕೋದ್ಯಮದವರ ಬಳಿ ಇರುವ ಆಯುಧ ರಾಜಕೀಯದವರ ಬಳಿ ಇಲ್ಲ. ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು” ಎಂದರು.

Advertisements

ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್, “ಇತ್ತೀಚೆಗೆ ಪತ್ರಿಕೆಗಳನ್ನು ಓದುವುದೇ ಬೇಡ ಎನ್ನಿಸುತ್ತದೆ, ಮುಖಪುಟದಲ್ಲಿ ಸುದ್ದಿಗಿಂತ ಜಾಹೀರಾತುಗಳೇ ಹೆಚ್ಚಾಗಿರುತ್ತವೆ. ಮಾಧ್ಯಮದಲ್ಲಿ ಕೆಲಸ ಮಾಡುವವರು ಮತ್ತೊಬ್ಬರಿಗೆ ಪಾಠ ಮಾಡುವಂತೆ ಇರಬೇಕು. ಮಾಧ್ಯಮಗಳು ಸಮಾಜವನ್ನು ಸರಿಪಡಿಸುವ ಕೆಲಸ ಮಾಡಬೇಕು. ರಾಜಕೀಯದೊಂದಿಗೆ ಸಂಬಂಧ ಇಟ್ಟುಕೊಳ್ಳಬಾರದು” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X