ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ; ಥಳಿತ

Date:

Advertisements

ಶಿವಮೊಗ್ಗದ ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೊ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೊ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ. ಹಣ ಕೊಡದಿದ್ದರೆ ವಿಡಿಯೊ ಹರಿಬಿಡುವುದಾಗಿ ಬೆದರಿಸಲಾಗಿದೆ. ಈ ವೇಳೆ ಯುವತಿ ಬಳಿ ಇದ್ದ ₹24,000 ಹಣ, ಗೂಗಲ್ ಪೇ ಮೂಲಕ ಯುವಕನಿಂದ ₹1500 ವರ್ಗಾಯಿಸಿಕೊಂಡಿದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Advertisements

ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್‌ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂಪಾಯಿ ಹಣ ಕೊಡದಿದ್ದರೆ ವಿಡಿಯೊ ಹರಿಬಿಡುವುದಾಗಿ ಬೆದರಿಕೆ ಒಡ್ಡಿದಾರೆಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಿಂಚಣಿ ಕೊಡುಗೆಗಾಗಿ ವಿದ್ಯುತ್ ದರ ಹೆಚ್ಚಳ; ಸಾರ್ವಜನಿಕರ ಆಕ್ರೋಶ

ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಬೆದರಿಸಿದ್ದರು. ₹6000 ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ₹6000 ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಪೀಡಿಸಿದ್ದು, ಜೀವ ಬೆದರಿಕೆ ಒಡ್ಡಿದ್ದಾರೆಂದು ಆಪಾದಿಸಲಾಗಿದೆ.

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X