ಶಿವಮೊಗ್ಗ | ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ

Date:

Advertisements

ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಅನುಗೌಡ ಅವರ ಕುಟುಂಬಕ್ಕೆ ಸೇರಿದ ಜಮೀನು ಇದೆ. ಆ ಜಮೀನಿನ ವಿಚಾರವಾಗಿ ಅನುಗೌಡ ಮತ್ತು ಸ್ಥಳೀಯ ನಿವಾಸಿ ನೀಲಮ್ಮ, ಮೋಹನ್‌ ನಡುವೆ ವಿವಾದವಿದೆ ಎನ್ನಲಾಗಿದೆ. ಇದೇ ವಿವಾದ ಸಂಬಂಧ ಆ ಇಬ್ಬರೂ ಅನುಗೌಡ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements
ಅನುಗೌಡ1

ಅನುಗೌಡ ತಮಿಳು ಹಾಗೂ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಶಿವರಾಜ್ ಕುಮಾರ್ ಅವರ ಸುಗ್ರೀವ, ಪುನಿತ್ ರಾಜ್​ಕುಮಾರ್ ಅವರ ಹುಡುಗರು ಮತ್ತು ಸುದೀಪ್​ ಜೊತೆ ಕೆಂಪೇಗೌಡ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲದೆ, ಸವಿಸವಿ ನೆನಪು, ದಂಡಂ ದಶಗುಣಂ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಇನ್ನು, ತಮಿಳಿನ ಮೌನಮಾನ ನೇರಂ, ಕಲಕಲ್, ಶಂಕರ, ಆಡಾದ ಆಟಮೆಲ್ಲ ಸಿನಿಮಾಗಳಲ್ಲಿಯೂ ಪೋಷಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X