ಶಿವಮೊಗ್ಗ | ಮರಗಳಿಗೆ ಕೊಡಲಿಯೇಟು; ಅಳುತ್ತಿದೆ ಹಸಿರು

Date:

ಶಿವಮೊಗ್ಗ ಹೊರವಲಯದ ಹರಕೆರೆಯ ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಮರಗಳನ್ನು ಕಡಿಯಲು ಶಿವಮೊಗ್ಗ ಅರಣ್ಯ ಇಲಾಖೆ ಅನುಮತಿ ನೀಡಿದೆ. ಇದನ್ನು ಹಲವರು ವಿರೋಧಿಸಿದ್ದಾರೆ. ಇಲಾಖೆಯು ಅನುಮತಿ ನೀಡುವ ಮುನ್ನ ಕಾನೂನಿನಲ್ಲಿ ಸೂಚಿಸಿರುವಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.

ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌-169)ಯನ್ನು ವಿಸ್ತರಿಸಿ, ಚತುಷ್ಪಥ ರಸ್ತೆ ಮಾಡಲು ಯೋಜಿಸಲಾಗಿದೆ. ಅದಕ್ಕಾಗಿ ರಸ್ತೆ ಬದಿಯ 60 ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ. ಈ ಬೆನ್ನಲ್ಲೇ, ಹರಕೆರೆಯಲ್ಲಿ ಕೆಲ ಮರಗಳು ನೆಲಕ್ಕುರುಳಿದ್ದು, ಸ್ಥಳೀಯರು ಪರಿಸರ ಪ್ರೇಮಿಗಳಿಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಮೂಲದ ‘ನೇಚರ್ ಕನ್ಸರ್ವೇಶನ್ ಟ್ರಸ್ಟ್ ಮತ್ತು ಗ್ರೀನ್ ಲೈವ್ಸ್’ನ ಮುಖಂಡರು ಮರ ಕಡಿಯುವುದನ್ನು ಕೂಡಲೇ ನಿಲ್ಲಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

 “ರಸ್ತೆ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಂಡಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಅನುಕೂಲ ಮಾಡಿಕೊಡಲು ಅರಣ್ಯ ಇಲಾಖೆ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿದೆ. ಮರ ಕಡಿಯುವ ಅಧಿಸೂಚನೆಯನ್ನು ನಿಗದಿತ ಪತ್ರಿಕೆಗಳಲ್ಲಿ ಪ್ರಕಟಿಸಿಲ್ಲ” ಎಂದು ಗ್ರೀನ್ ಲೈವ್ಸ್‌ನ ಶ್ರವಣ್ ಎಂ.ಸಿ ಕಿಡಿಕಾರಿದ್ದಾರೆ.

ಆರೋಪಗಳನ್ನು ನಿರಾಕರಿಸಿರುವ ಡಿಸಿಎಫ್ (ಶಿವಮೊಗ್ಗ ಪ್ರಾದೇಶಿಕ ವಿಭಾಗ) ಜೆ ಶಿವಶಂಕರ್, “ಮರಗಳನ್ನು ಕಡಿಯಲು ಅನುಮತಿ ನೀಡುವ ಮುನ್ನ ಅರಣ್ಯ ಇಲಾಖೆ ಎಲ್ಲ ಕ್ರಮಗಳನ್ನು ಅನುಸರಿಸಿದೆ. ಅದರಂತೆ, ಪತ್ರಿಕೆಗಳಲ್ಲಿ ನೋಟಿಸ್ ಪ್ರಕಟವಾದರೂ ಯಾವುದೇ ಆಕ್ಷೇಪಣೆ ಬಂದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮರ ಕಡಿಯಲಿಲ್ಲ ಸರಿ ಹಾಗಾದರೆ ರೋಡ್ ಅಗಲ ಮಾಡುವುದಾದರು ಹೇಗೆ ನಾವು ಮುಂದುವರಿಯುವುದಾದರು ಹೇಗೆ ಮರ ಕಡಿಯಿರಿ ಹೊಸ ಮರ ನೆಡಿ ಅದೆಯೇ ಹೊಸ ನೀತಿ ಸಮ್ಮನೇ ಮಾತನಾಡುವುದಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ...

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...

ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ...