ಶಿವಮೊಗ್ಗ | ಭಗವಾನ್ ಬಿರ್ಸಾ ಮುಂಡಾ ಜಯಂತಿ

Date:

ಬ್ರಿಟಿಷರು ಭಾರತೀಯರ ಮೇಲೆ ದಬ್ಬಾಳಿಕೆ ಮಾಡಲು ಶುರು ಮಾಡಿದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಸಿಡಿದೆದ್ದ ಒಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯೇ ಭಗವಾನ್ ಬಿರ್ಸಾ ಮುಂಡಾರವರು ಎಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸಣ್ಣಹನುಮಂತಪ್ಪ ಜಿ ತಿಳಿಸಿದರು.

- Advertisement -

ಶಿವಮೊಗ್ಗದ ನೆಹರು ಯುವ ಕೇಂದ್ರ, ಭಾರತ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಾಗರ್ ಯೂತ್ ಫೋರ್ಸ್ ಅಸೋಸಿಯೇಷನ್‌ನೊಂದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಭಗವಾನ್ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

“ಭಾರತ ಆಳಿಸಿಕೊಳ್ಳುವ ದೇಶವೇ ಹೊರತು ಆಳುವ ದೇಶವಲ್ಲವೆಂದು ತಿಳಿದ ಬ್ರಿಟಿಷರು ಭಾರತದ ಮೇಲೆ ದಬ್ಬಾಳಿಕೆ ನಡೆಸಲು ಆರಂಭಿಸಿದಾಗ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಲಕ್ಷಾಂತರ ಮಂದಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅದರಲ್ಲಿ ವಿಶೇಷವಾಗಿ ಬುಡಕಟ್ಟು ಜನಾಂಗದವರು ಮತ್ತು ಅಲೆಮಾರಿ ಜನಾಂಗದವರು ಕಾಡಿನಲ್ಲಿ ಕಾಡುಪಾಪಗಳಂತೆ ಜೀವನ ನಡೆಸುತ್ತಿದ್ದರು. ಪರಿಸರದ ಜತೆಗೆ ತಮ್ಮ ಜೀವನ ಕಳೆಯುತ್ತಿದ್ದರು. ಇಂತಹ ಜನಾಂಗದವರ ಮೇಲೆ ಮೇಲೆ ಬ್ರಿಟಿಷರು ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಭಗವಾನ್ ಬಿರ್ಸಾ ಮುಂಡಾ ಅವರು ಒಂದು ಗುಂಪುಕಟ್ಟಿಕೊಂಡು ಬ್ರಿಟಿಷರ ಅಟ್ಟಹಾಸ ಮುರಿಯಲು ಮುಂದಾದರು” ಎಂದು ಹೇಳಿದರು.

“ಬಿರ್ಸಾ ಮುಂಡಾ ಅವರು ಅಕ್ಷರಶಃ ಯಾವುದೇ ಹೆಸರಿಗಾಗಲಿ, ಕೀರ್ತಿಗಾಗಲಿ ಹೋರಾಟ ಮಾಡಿದವರಲ್ಲ. ತಮ್ಮ ಬುಡಕಟ್ಟು ಜನಾಂಗದ ಮೇಲೆ ಮಿತಿಮೀರಿದ ದಬ್ಬಾಳಿಕೆ, ದೌರ್ಜನ್ಯದ ವಿರುದ್ಧ ಸಿಡಿದೆದ್ದು, ಬ್ರಿಟಿಷರಿಗೆ ಕ್ರಾಂತಿಯ ಕಿಡಿ ಹೇಗಿರುತ್ತೆ ಎಂಬುದನ್ನು ಈ ನಾಯಕ ತೋರಿಸಿಕೊಟ್ಟಿದ್ದಾರೆ. ಇಂತಹ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರನ ಫೋಟೋ ಕೂಡಾ ಇಂದಿಗೂ ಪಾರ್ಲಿಮೆಂಟ್‌ನಲ್ಲಿದೆ. ಇಂತಹ ಆದರ್ಶ ವ್ಯಕ್ತಿಗಳ ಬದುಕನ್ನು ನಮ್ಮ ವೈಯಕ್ತಿಕ ಜೀವನದಲ್ಲಿ ರೂಢಿಸಿಕೊಳ್ಳೋಣ” ಎಂದು ಕರೆ ನೀಡಿದರು.

ಇತಿಹಾಸ ಪ್ರಾಧ್ಯಾಪಕರಾದ ರಾಜು ಮಾತನಾಡಿ, “ಪ್ರಪಂಚದ ಅನೇಕ ದೇಶಗಳಲ್ಲಿ ಭಾರತವೂ ಸೇರಿದಂತೆ ತಳಸಮುದಾಯದ ಜನಾಂಗದವರು ಅಂದರೆ ಬುಡುಕಟ್ಟು, ಅಲೆಮಾರಿ ಹಾಗೂ ಆದಿವಾಸಿಗಳು ಮೊದಲಿಂದಲೂ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದಂತಹ ಸಮುದಾಯಗಳಾಗಿವೆ. ಈ ಜನಾಂಗದವರು ಅಂದಿನಿಂದಲೂ ಕೂಡಾ ತಮ್ಮ ಅಸ್ತಿತ್ವಕ್ಕಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಶೋಷಣೆ, ದೌರ್ಜನ್ಯಗಳನ್ನು ಅಂತ್ಯಗೊಳಿಸಲು ಭಾರತದಲ್ಲಿಯೂ ಕೂಡಾ ಬುಡಕಟ್ಟು ಜನಾಂಗದ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರು ಹೋರಾಟಕ್ಕೆ ಇಳಿಯುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್‌ಗೆ ಆಹ್ವಾನ

ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಎರಡರ ಸಂಯೋಜನಾಧಿಕಾರಿ ಮಮತಾ ಹೆಗಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಸಾಗರ್ ಯೂತ್ ಫೋರ್ಸ್ ಅಸೋಸಿಯೇಷನ್ ಮುಖ್ಯಸ್ಥರಾದ ಪುಷ್ಪಲತಾ, ಭಾರತಿ ಸೇರಿದಂತೆ ಇತರರು ಇದ್ದರು.

ವರದಿ : ಅಮಿತ್ ಆರ್, ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...