ಶಿವಮೊಗ್ಗ | ಫುಟ್ ಪಾತ್ ಗೆ ನುಗ್ಗಿದ ಬೈಕ್ : ಇಬ್ಬರು ದುರ್ಮರಣ

Date:

Advertisements

ಶಿವಮೊಗ್ಗದ ಸಾಗರ ರಸ್ತೆಯ ಮಲ್ನಾಡು ಗೇಟ್ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇಂದು ನಸುಕಿನಲ್ಲಿ ಸಂಭವಿಸಿದೆ.

ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊತೆ ಇಲ್ಲೇ ವಾಸವಾಗಿದ್ದರು.

ಆಯನೂರು ಗೇಟ್ ಕಡೆಯಿಂದ ಕೆಎ 14 ಈ ವೈ 1306 ಕ್ರಮ ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಫುಟ್ಪಾತ್ ನಲ್ಲಿದ್ದ ಟೆಂಟ್ ಗೆ ಡಿಕ್ಕಿ ಹೊಡೆದಿದ್ದಾರೆ .

ಟೆಂಟ್ ನಲ್ಲಿ ದುರ್ಗಾ ಪ್ರಸಾದ್ ಅವರ ತಂದೆ ನಾಗಯ್ಯ, ತಾಯಿ ಕಾಮೇಶ್ವರಿ ಹಾಗೂ ತಂಗಿ ಜ್ಯೋತಿ ಎ ಇದ್ದರು. ಕಾಮೇಶ್ವರಿ ಸ್ಥಳದಲ್ಲೇ ಸಾವಿಗೀಡಾದರು.

ದುರ್ಗಾ ಪ್ರಸಾದ ಮೂತ್ರ ವಿಸರ್ಜನೆಗೆಂದು ಬೆಳಗಿನ ಜಾವ ಐದು ಇಪ್ಪತ್ತಕ್ಕೆ ಟೆಂಟ್ ನಿಂದ ಹೊರ ಬಂದಾಗ ಈ ಘಟನೆ ನಡೆದಿದ್ದು ಅವರು ಪಾರಾಗಿದ್ದಾರೆ.

ಬೈಕ್ ಅನ್ನು ಸುದರ್ಶನ್ ಎನ್ನುವರು ಚಲಾಯಿಸುತ್ತಿದ್ದು ಆತನ ಹಿಂದೆ ಆಕಾಶ ಎಂಬವನು ಕುಳಿತಿದ್ದನು ಆಕಾಶನಿಗೆ ತೀವ್ರವಾಗಿ ಗಾಯಗಳಾಗಿದ್ದು, ಆತನನ್ನು ಮೆಗನ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಸಾಗಿಸುವಾಗ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ತಲೆಗೆ ಹೊಡೆತ ಬಿದ್ದಿದ್ದ ಕಾಮೇಶ್ವರಿ ರವರು ಸಾವನ್ನಪ್ಪಿರುವುದಾಗಿ ಮೂಲಗಳು ದೃಢಪಡಿಸಿವೆ. ಪ್ರಕರಣ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X