ಶಿವಮೊಗ್ಗ | ʼಬಸ್‌ ಬಂದರೆ ಸಾಕಪ್ಪʼ: ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರ ಗೋಳು!

Date:

Advertisements

ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್‌ ಇರಲಿ, ಸದ್ಯ ಬಸ್‌ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ. ದಿನ ನಿತ್ಯ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ.

ಗಂಟೆಗಟ್ಟಲೇ ಕಾದರೂ ಬಸ್ ಬರುವುದೇ ಇಲ್ಲ. ಇದರಿಂದ ತಡವಾಗಿ ಬರುವ ಬಸ್‌ಗಳಲ್ಲಿ ನೂಕು ನುಗ್ಗುಲು ಜಾಸ್ತಿಯಾಗುತ್ತಿದೆ. ಕೆಲವು ದಿನಗಳ ಹಿಂದೆ ಶಿವಮೊಗ್ಗ-ಭದ್ರಾವತಿ ಮಧ್ಯ ಬರುವ ಮಾಚೇನಹಳ್ಳಿ ಹಾಲಿನ ಡೈರಿ ಬಳಿ ಬಸ್ ವಿಪರೀತ ರಶ್ ಇದ್ದ ಕಾರಣ ಒಬ್ಬ ಮಹಿಳೆ ಬಸ್ ಬಾಗಿಲಲ್ಲಿ ನಿಂತು, ಕಾಲು ಜಾರಿ ಬಿದ್ದು ಸಾವಿಗೀಡಾಗಿದ್ದರು.

ಶಿವಮೊಗ್ಗ ನಗರದ ಯಾವುದೇ ಬಸ್ ನಿಲ್ದಾಣ ನೋಡಿದರೂ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು ಕಾಣ ಸಿಗುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ, ಆಶಕ್ತರಿಗೆ, ಆಸ್ಪತ್ರೆಗೆ ಹೋಗುವ ರೋಗಿಗಳಿಗೆ, ಕಾರ್ಮಿಕರುಗಳು ಹಾಗೂ ಆಸ್ಪತ್ರೆ ಸಿಬ್ಬಂದಿ, ಗಾರ್ಮೆಂಟ್ಸ್ ಉದ್ಯೋಗಿಗಳು, ನಗರದಿಂದ ಹಳ್ಳಿಗೆ, ಹಳ್ಳಿಯಿಂದ ನಗರಕ್ಕೆ ಪ್ರಯಾಣಿಸುವ ಶಿಕ್ಷಕ ವೃಂದ, ಬಸ್‌ ನಂಬಿಕೊಂಡಿರುವ ರೈತಾಪಿ ಜನಗಳಗೆ ತುಂಬಾ ಅನಾನುಕೂಲವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ.

Advertisements

‘ಸರ್ಕಾರದ ಶಕ್ತಿ ಯೋಜನೆಯೇ ಇದಕ್ಕೆ ಕಾರಣ’ ಎಂದು ಹಲವರು ದೂರುತ್ತಿದ್ದರೆ, ಸಾರ್ವಜನಿಕರು ಸಾರಿಗೆ ಅಧಿಕಾರಗಳ ಬಳಿ ತಮ್ಮ ಅಹವಾಲು ಹೇಳಿಕೊಂಡರೂ ಕೂಡ ಸರಿಪಡಿಸಿಕೊಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ.

ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ, ಇನ್ನೂ ಕೂಡ ಸರಿಯಾದ ಕ್ರಮವಹಿಸಿಲ್ಲ. ಆದಷ್ಟು ಬೇಗ ಇದಕ್ಕೆ ಸರಿಯಾದ ಕ್ರಮ ವಹಿಸಿ ಸಕಾಲದಲ್ಲಿ ಬಸ್ ಒದಗಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಅಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X