ಶಿವಮೊಗ್ಗ | ಖಬರಸ್ಥಾನಕ್ಕಾಗಿ ಜಾಗ ನೀಡುವಂತೆ ಮುಸ್ಲಿಂ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

Date:

Advertisements

ಖಬರಸ್ಥಾನಕ್ಕಾಗಿ ಜಮೀನು ನೀಡಬೇಕು ಎಂದು ಆಗ್ರಹಿಸಿ ಚೋರಡಿಯ ಜಾಮೀಯಾ ಮಸ್ಟಿದ್ ಕಮಿಟಿಯ ಮುಖಂಡರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.

ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳಿವೆ. ಆದರೆ ಮುಸ್ಲಿಮರು ಮರಣ ಹೊಂದಿರೆ ಅವರ ಅಂತ್ಯ ಸಂಸ್ಕಾರ ಮಾಡಲು ಜಾಗವೇ ಇಲ್ಲವಾಗಿದೆ. ಇದುವರೆಗೂ ಕುಮದ್ವತಿ ನದಿಯ ದಡದಲ್ಲಿಯೇ ದಫನ ಮಾಡಿಕೊಂಡು ಬರುತ್ತಿದ್ದರು. ಆದರೆ ಇದಕ್ಕೆ ಯಾವುದೇ ದಾಖಲಾತಿ ಇಲ್ಲ ಮತ್ತು ಅತಿವೃಷ್ಟಿಯಯಿಂದಾಗಿ ಗೋರಿ ಸಮೇತ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿವೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

1002031840

ಈ ಬಗ್ಗೆ ಕಳೆದ 25 ವರ್ಷಗಳಿಂದಲೂ ಬೇಡಿಕೆ ಇಡುತ್ತಾ ಬಂದಿದ್ದೆವು.‌ಆದರೂ ಕೂಡ ಸರ್ಕಾರವಾಗಲೀ, ಅಧಿಕಾರಿಗಳಾಗಲೀ ಸ್ಮಶಾನಕ್ಕೆ ಜಾಗ ನೀಡಿಲ್ಲ. ಆದ್ದರಿಂದ ಈಗಲಾದರೂ ಖಬರಸ್ಥಾನಕ್ಕೆ ಜಾಗ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

Advertisements

ಮನವಿ ಸಲ್ಲಿಸಿದ ಸಂದರ್ಭದಲ್ಲಿ ಚೋರಡಿ ಜಾಮೀಯಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್, ಪ್ರಮುಖರಾದ ಅನ್ವರ್, ಅಥಾವುಲ್ಲಾ, ಸನಾವುಲ್ಲಾ, ಬಾಷಾ, ನಯಾಬ್. ಕಲೀಮುಲ್ಲಾ, ರಿಜ್ವಾನ್, ನಜೀರ್ ಅಹಮ್ಮದ್, ಮೊಹಮ್ಮದ್, ಮುದಾಸಿರ್, ಸಮೀವುಲ್ಲಾ, ಖಾಸೀಂ ಸೇರಿದಂತೆ ಇನ್ನಿತರರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X