ಶಿವಮೊಗ್ಗ | ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ

Date:

Advertisements

ಭ್ರೂಣಹತ್ಯೆಯಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಎಚ್ ಎಸ್ ಬಾಲಾಜಿ ಒತ್ತಾಯಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು, “ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೃತ್ಯಕ್ಕೆ ಕೈ ಹಾಕಿದ್ದು ಮನುಕುಲವೇ ತಲೆ ತಗ್ಗಿಸುವಂತಾಗಿದೆ” ಎಂದರು.

“ತಕ್ಷಣದ ಮಾಹಿತಿ ಪ್ರಕಾರ ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣಹತ್ಯೆ ಪ್ರಕರಣ ಮಾಡುತ್ತಿದ್ದಾರೆ. ಇದರ ಲೆಕ್ಕದಂತೆ ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರಬಹುದು” ಎಂದು ಶಂಕೆ ವ್ಯಕ್ತಪಡಿಸಿದರು.

Advertisements

“ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳೇ ಮಾಹಿತಿ ನೀಡಿರುವುದು ಆತಂಕಕ್ಕೀಡಾಗುವಂತೆ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

“ವೈದ್ಯರು ತಮ್ಮ ವೃತ್ತಿ ಧರ್ಮ ಮರೆಯದೇ ನೈತಿಕ ಮೌಲ್ಯ ಉಳಿಸಿಕೊಳ್ಳಬೇಕು. ಭ್ರೂಣಹತ್ಯೆಯಿಂದ ಉಂಟಾಗಬಹುದಾದ ಸಮಸ್ಯೆ ಹಾಗೂ ಸಾಮಾಜಿಕ ಅಸಮತೋಲನದ ಬಗ್ಗೆ ಅರಿವು ಮೂಡಿಸಿದಲ್ಲಿ ಮಾತ್ರ ಈ ಪಿಡುಗು ನಿವಾರಣೆ ಮಾಡಲು ಸಾಧ್ಯ” ಎಂದು ಬಾಲಾಜಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X