ಶಿವಮೊಗ್ಗ | ಅವಹೇಳನಕಾರಿ ಕಮೆಂಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್

Date:

Advertisements
  • ಅವಹೇಳನಕಾರಿಯಾಗಿ ಕಮೆಂಟ್ ಆರೋಪಿಸಿ ದೂರು ನೀಡಿದ್ದ ಕಾಂಗ್ರೆಸ್‌ನ ಸೌಗಂಧಿಕಾ ರಘುನಾಥ್
  • ಯುವ ಬ್ರಿಗೇಡ್ ಸಂಸ್ಥಾಪಕನ ವಿರುದ್ಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಆರೋಪದ ಮೇಲೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಆ. 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು.

ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್​​ಬುಕ್​ನಲ್ಲಿ ಬರೆದುಕೊಂಡಿದ್ದರು. ಈ ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ”ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Advertisements
sulibele comment

ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಾಮೆಂಟ್ ಹಾಕಿದ್ದರು. ಈ ಕಾರಣಕ್ಕೆ ಫೇಸ್​​​​ಬುಕ್​​ನಲ್ಲಿ ಅವಾಚ್ಯವಾಗಿ ಕಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾಥ್ ಆರೋಪಿಸಿದ್ದಾರೆ.

WhatsApp Image 2023 08 28 at 1.48.34 PM

‘ಕಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್​​ಗಳಿಂದ ನನ್ನ ತೇಜೋವಧೆಗೆ ಪ್ರಯತ್ನಪಟ್ಟಿವೆ. ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ‌. ಸ್ವತಃ ಸೂಲಿಬೆಲೆ ಕಮೆಂಟ್ ಮಾಡಿ, ನಿನಗೆ ಏನು ಉರಿಯುತ್ತೆ’ ಎಂದು ಹಾಕಿದ್ದಾರೆ ಎಂದ ಸೌಗಂಧಿಕಾ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X