ಶಿವಮೊಗ್ಗ | ಮಧುಮೇಹ ಜಾಗೃತಿ; ಆಶಾ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ

Date:

Advertisements

ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಜಿ ಕೆ ಮಿಥುನ್‌ ಕುಮಾರ್‌ ಅಭಿಪ್ರಾಯಪಟ್ಟರು.

ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ವಿನ್ ಲೈಫ್, ಡಯಬಿಟಿಸ್ ವೆಲ್‌ನೆಸ್ ಸೆಂಟರ್, ಮೆಟ್ರೋ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ತರಬೇತಿ ಕಾರ್ಯಗಾರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ ಎಸ್‌ ನಟರಾಜ್‌ ಮಾತನಾಡಿ, “ಆರೋಗ್ಯ ಸುಧಾರಣೆಯಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ. ಅವರಿಗೆ ಇಂತಹ ತರಬೇತಿ ಅಗತ್ಯವಾಗಿ ಬೇಕಾಗಿತ್ತು. ಆ ನಿಟ್ಟಿನಲ್ಲಿ ವಿನ್ ಲೈಫ್, ಡಯಬಿಟಿಸ್ ವೆಲ್ ನೆಸ್ ಸೆಂಟರ್ ಹಾಗೂ ಮೆಟ್ರೋ ಆಸ್ಪತ್ರೆ ಮಧುಮೇಹ ಮತ್ತು ಸಿಪಿಆರ್‌ ಕುರಿತು ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರ ಶ್ಲಾಘನೀಯವಾದದ್ದು” ಎಂದರು.

Advertisements

ಕಾರ್ಯಾಗಾರದಲ್ಲಿ ಆಶಾ ಕಾರ್ಯಕರ್ತೆಯರು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದರು. ಈ ಕಾರ್ಯಾಗಾರದಲ್ಲಿ ಮಧುಮೇಹ @360°, ಸಮತೋಲನ ಆಹಾರ ಪದ್ಧತಿ, ಮೆಡಿಕಲ್ ಯೋಗ ಥೆರಪಿ, ತುರ್ತು ಜೀವ ರಕ್ಷಕ ತರಬೇತಿ ಹಾಗೂ ಆಧುನಿಕ ಆವಿಷ್ಕಾರಗಳ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸವನ್ನು ಸವಿಸ್ತಾರವಾಗಿ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್ ದಂಧೆ ವಿರುದ್ಧ ಜನಪರ ಸಂಘಟನೆಗಳಿಂದ ಪೋಸ್ಟರ್ ಅಭಿಯಾನ

ಡಾ ಪೃಥ್ವಿ ಬಿ ಸಿಯವರಿಂದ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಡಯಬಿಟಿಸ್ ಕುರಿತು ಸಂಪೂರ್ಣ ಮತ್ತು ನಿರಂತರ ಮಾಹಿತಿಗಾಗಿ ಕ್ಯೂಆರ್ ಸ್ಕ್ಯಾನರ್ ಕೋಡ್ ಅನಾವರಣಗೊಳಿಸಲಾಯಿತು.

ವೇದಿಕೆಯಲ್ಲಿ ಆರ್‌ಸಿಹೆಚ್ ಅಧಿಕಾರಿ ಡಾ ಓ ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಾಗರಾಜ್ ನಾಯಕ್ ಎಲ್, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ ಪಿ ಲಕ್ಷ್ಮೀ ನಾರಾಯಣ ಆಚಾರ್‌ ಹಾಗೂ ವಿನ್ ಲೈಫ್‌ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ  ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪೃಥ್ವಿ ಬಿ ಸಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X