ಶಿವಮೊಗ್ಗ | ವಿದ್ಯುತ್ ಇಲ್ಲದೆ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರು

Date:

ಶವಗಾರದಲ್ಲಿ ವಿದ್ಯುತ್ ಇಲ್ಲದೆ, ಮೊಬೈಲ್ ಟಾರ್ಚ್‌ ಮತ್ತು ಬ್ಯಾಟರಿ ಬೆಳಕಿನಲ್ಲಿಯೇ ವೈದ್ಯರು ಮರಣೋತ್ತರ ಪರೀಕ್ಷೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ವಿದ್ಯುತ್‌ ಸಂಪರ್ಕವೇ ಇಲ್ಲವಾಗಿದೆ. ಹೀಗಾಗಿ, ಮಂಗಳವಾರ ರಾತ್ರಿ ಟಾರ್ಚ್‌ ಬೆಳಕಿನಲ್ಲಿಯೇ ವೈದ್ಯರು ಪೋಸ್ಟ್‌ಮಾರ್ಟಮ್‌ ಮಾಡಿದ್ದಾರೆ.

ರಿಪ್ಪನ್‌ಪೇಟೆ ಬಳಿಕ ಪುರಮಠದಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ವಿದ್ಯುತ್ ಸಂಪರ್ಕ ಇಲ್ಲದಿರುವುದು ಸರ್ಕಾರ ಮತ್ತು ಜಿಲ್ಲಾಡಳಿತ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...