ಶಿವಮೊಗ್ಗ | ಸರ್ಕಾರಿ ನೌಕರರ ಸಂಘದ ಚುನಾವಣೆ; ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟ

Date:

Advertisements

ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಕುತೂಹಲ ಕೆರಳಿದ್ದ ಶಿವಮೊಗ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಶನಿವಾರ ನಡೆದಿದ್ದು, ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟವಾಗಿದೆ.

ಶಿವಮೊಗ್ಗ ಜಿಲ್ಲಾ ಘಟಕದ 30 ಮಂದಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ವಿಶೇಷವಾಗಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಂದಾಯ ಇಲಾಖೆಯಲ್ಲಿ ಸತ್ಯನಾರಾಯಣ ಅವರು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ತಹಶೀಲ್ದಾರ್‌ ಗಿರೀಶ್‌ ಅವರ ವಿರುದ್ದ ಒಂದು ಮತದಿಂದ ವಿಜಯಶಾಲಿಯಾಗಿ, ನೌಕರರ ಜಿಲ್ಲಾ ಘಟಕಕ್ಕೆ ಪ್ರವೇಶಿಸಲಿದ್ದಾರೆ.

ಗಿರೀಶ್ ಬಿ(ಕೃಷಿ ಇಲಾಖೆ), ದೀಪಕ್ ಪಿ ಎಸ್(ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ), ಕಿರಣ್ ಎಚ್ (ಜಿಲ್ಲಾ ಪಂಚಾಯತ್), ಪ್ರವೀಣ್ ಕುಮಾರ್ ಜಿ(ತಾಲೂಕು ಪಂಚಾಯಿತ್), ಮಧುಸೂದನ್(ಅಬಕಾರಿ ಇಲಾಖೆ), ಕೊಟ್ರೇಶ್(ಸಮಾಜ ಕಲ್ಯಾಣ ಇಲಾಖೆ), ಅನಿತಾ ವಿ(ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ), ರಂಗನಾಥ್(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ), ಸತ್ಯಭಾಮ ಎಸ್ ಜಿ(ಮೀನುಗಾರಿಕೆ ಇಲಾಖೆ), ರಾಜು ಲಿಂಬು ಚೌಹಣ್‌(ಅರಣ್ಯ ಇಲಾಖೆ), ಡಾ.ಗುಡದಪ್ಪ ಕಸಬಿ(ಆರೋಗ್ಯ ಇಲಾಖೆ), ಡಾ ಸಿ ಎ ಹಿರೇಮಠ್(ಆಯುಷ್ ಇಲಾಖೆ), ಮಹೇಶ ಪಿಎಲ್(ಇಎಸ್‌ ಐ), ರಮೇಶ್ ಎಸ್ ವೈ(ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ) ಗೆಲುವು ಸಾಧಿಸಿದ್ದಾರೆ.

Advertisements

ಮಹೇಶ್ ಕೆಎಚ್(ಗ್ರಂಥಾಲಯ ಇಲಾಖೆ), ಲಿಂಗಪ್ಪ ಮತ್ತು ಧರ್ಮಪ್ಪ(ಪ್ರೌಢಶಾಲಾ ವಿಭಾಗ), ಶಶಿಧರ್ ಡಿ ಟಿ(ಪದವಿ ಪೂರ್ವ ಶಿಕ್ಷಣ), ಧನ್ಯ ಕುಮಾರ್(ಪ್ರಥಮ ದರ್ಜೆ ಕಾಲೇಜು), ಹನುಮಂತಪ್ಪ ಜಿ(ಮಹಿಳಾ ಪಾಲಿಟೆಕ್ನಿಕ್), ಅಣ್ಣಪ್ಪ ವಿ ಬಿ(ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ), ರವಿಕಿರಣ್ ವೈ(ಗಣಿ ಮತ್ತು ಭೂ ವಿಜ್ಞಾನ ಇಲಾಖೆ), ಚನ್ನಕೇಶವ ಮೂರ್ತಿ(ಭೂಮಾಪನ ಮತ್ತು ಕಂದಾಯ ಇಲಾಖೆ), ಸುಬ್ರಮಣ್ಯ ಜಾದವ್(ಶಾಲಾ ಶಿಕ್ಷಣ ಇಲಾಖೆ), ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಸ್ಪತ್ರೆ ಮತ್ತು ಇತರ ಇಲಾಖೆಗಳು ಕ್ಷೇತ್ರದಿಂದ ವಿಜಯ್ ಅಂಟೊ ಸಗಾಯ್, ಅಶೋಕ ಟಿಜಿ ಮತ್ತು ನರಸಿಂಹ ಕೆ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅರಬೆತ್ತಲೆಗೊಳಿಸಿ ಮಹಿಳೆಗೆ ಹಲ್ಲೆ ಪ್ರಕರಣ; ಸಂತ್ರಸ್ತರ ಮನೆಗೆ ಶಾಸಕರು, ಪೋಲಿಸ್ ಆಯುಕ್ತರ ಭೇಟಿ

ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಿಲ್ಲಾ‌ ಶಾಖೆಯ 68 ಮಂದಿ ನಿರ್ದೇಶಕರ ಸ್ಥಾನಗಳ ಪೈಕಿ ಈಗಾಗಲೇ‌ 38 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 30 ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದಿದೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮತದಾನಕ್ಕೆ 11 ಬೂತ್‌ಗಳನ್ನು ನಿರ್ಮಿಸಲಾಗಿತ್ತು. 25 ಇಲಾಖೆಯಲ್ಲಿ 28 ಜನ ಆಯ್ಕೆ ಆಗಬೇಕಿದ್ದು, 70 ಜನ ಸ್ಪರ್ಧಾಳುಗಳು ಕಣದಲ್ಲಿದ್ದರು. ಬೆಳಿಗ್ಗೆ 9 ಗಂಟೆಯಿಂದ ಮತದಾನ ಶುರುವಾಗಿ, ಸಂಜೆ 4 ಗಂಟೆಗೆ ಮುಕ್ತಾಯಗೊಂಡಿತು. 4-30ರಿಂದ ಮತ ಎಣಿಕೆ ಶುರುವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X