ಶಿವಮೊಗ್ಗ | ಪರಿಸರ ಉಳಿಸುವ ಬದ್ಧತೆಗೆ ಎಲ್ಲರೂ ಕೈ ಜೋಡಿಸುವ ಅಗತ್ಯವಿದೆ: ರೈತ ಮುಖಂಡ ಬಸವರಾಜಪ್ಪ

Date:

Advertisements

“ನಾವು ಉಸಿರಾಡುವ ಆಮ್ಲಜನಕವನ್ನು ಮರಗಿಡಗಳು ಮಾತ್ರ ನೀಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿವರ್ಷ ಐದು ಸಸಿಗಳನ್ನು ಹಾಕಿ ಬೆಳೆಸುವ ಪ್ರತಿಜ್ಞೆ ಮಾಡಬೇಕಿದೆ. ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳ ಬಳಕೆ ನಿಲ್ಲಿಸಬೇಕಿದೆ. ಆ ಮೂಲಕ ಪರಿಸರ ಉಳಿಸುವ ಬದ್ಧತೆಗೆ ಎಲ್ಲರೂ ಕೈ ಜೋಡಿಸಬೇಕಾದ ಅಗತ್ಯವಿದೆ ಎಂದು ರಾಜ್ಯ ರೈತ ಸಂಘ, ಹಸಿರು ಸೇನೆ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರೋಟರಿ ಕ್ಲಬ್ ಸೆಂಟ್ರಲ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಹಸಿರು ಮತ್ತು ನೀರು ಜಾಗೃತಿ ಕಾರ್ಯಕ್ರಮ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

WhatsApp Image 2024 10 10 at 3.54.39 PM

“ಹಸಿರು ಮತ್ತು ನೀರಿನ ಬಗ್ಗೆ ಜಾಗೃತಿ ಮೂಡಿಸುವ ಈ ಕಾರ್ಯಕ್ರಮ ತುಂಬಾ ಒಳ್ಳೆಯ ವಿಷಯ. ಇವೆರಡು ನಮ್ಮ ಜೀವನದಲ್ಲಿ ಅತ್ಯವಶ್ಯಕ. ಪ್ರಕೃತಿಯನ್ನು ಕಾಪಾಡಿಕೊಳ್ಳಬೇಕು. ಅಭಿವೃದ್ಧಿ ಹೆಸರಿನಲ್ಲಿ ನಾಶ ಮಾಡುವಷ್ಟು ಮರಗಿಡಗಳನ್ನ ಮತ್ತೆ ಬೆಳೆಸುತ್ತಿಲ್ಲ. ನಾವು ಉಸಿರಾಡುವ ಆಮ್ಲಜನಕವನ್ನು ಮರಗಿಡಗಳು ಮಾತ್ರ ನೀಡಲು ಸಾಧ್ಯ. ಹಿಂದಿನ ಕಾಲದಲ್ಲಿ ನಾವುಗಳು ಯಾವುದೇ ರಾಸಾಯನಿಕ ಗೊಬ್ಬರವನ್ನು ಹಾಕದೆ ಬೆಳೆ ಬೆಳೆದು ದೇಶದ ಜನರಿಗೆ ಕೊಡುತ್ತಿದ್ದೆವು. ಈಗ ಮತ್ತೇ ಆ ಸಾವಯವ ಪದ್ದತಿಯನ್ನು ಅನುಸರಿಸಿ ಬೆಳೆ ಬೆಳೆಯಬೇಕು ಈ ಸಂಸ್ಕೃತಿಯನ್ನ ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

Advertisements

“ನೀರಿಗಾಗಿ ಈಗಾಗಲೇ ಹೊಡೆದಾಟ ಶುರುವಾಗಿದೆ ಅಂದರೆ ನೀರು ನಮಗೆ ಎಷ್ಟು ಮಹತ್ವವಿದೆ ಎಂಬುದನ್ನ ಅರಿಯಬೇಕಿದೆ. ಸಾವಿರಾರು ಕೆರೆಗಳನ್ನ ಮುಚ್ಚಿಹಾಕಿ ಅಭಿವೃದ್ಧಿ ಮಾಡುತ್ತಿದ್ದೇವೆ. ನೀರನ್ನು ಭೂಮಿಯಲ್ಲಿ ಇಂಗಿಸುವ ಕೆಲಸ ಮಾಡಬೇಕಿದೆ. ನಮ್ಮ ಮಲೆನಾಡಿನ ಕೆರೆಕಟ್ಟೆಗಳ ವಿಶೇಷವೆಂದರೆ, ಒಂದು ಕರೆ ಕೋಡಿ ಬಿದ್ದರೆ ಇನ್ನೊಂದು ಕೆರೆಗೆ ಹೋಗಿ ಸೇರುತ್ತದೆ. ಇಂತಹ ಒಂದು ವಿಜ್ಞಾನವನ್ನು ಆಗಿನ ಕಾಲದಲ್ಲಿ ರೈತರು ಕಂಡುಹಿಡಿದಿದ್ದರು. ಈ ಕೆರೆಕಟ್ಟೆಗಳನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ” ಎಂದು ಎಚ್.ಆರ್.ಬಸವರಾಜಪ್ಪ ತಿಳಿಸಿದರು.

WhatsApp Image 2024 10 10 at 3.54.40 PM

ಸಾವಯವ ಕೃಷಿ ಪದ್ದತಿಯನ್ನು ಅನುಸರಿಸಿ ವ್ಯವಸಾಯ ಮಾಡುತ್ತಿರುವ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ, ಜಿಲ್ಲಾ ಕಾರ್ಯಾಧ್ಯಕ್ಷರಾದ ಪಿ.ಡಿ ಮಂಜಪ್ಪ, ಹನುಮಂತಾಪುರ ದೇವೇಂದ್ರಪ್ಪ ಇನ್ನೂ ಹಲವರಿಗೆ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದ ಶಾಸಕ ರಾಜು ಕಾಗೆ

ಈ ಸಂದರ್ಭದಲ್ಲಿ ಶಿವಮೊಗ್ಗ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿಯವರು ದಿವ್ಯಸಾನಿಧ್ಯವನ್ನು ವಹಿಸಿದ್ದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಆರ್ ಸಿ ಜಗದೀಶ್, ರೋಟರಿ ಜಿಲ್ಲೆ 3182 ಜಿಲ್ಲಾ ಗವರ್ನರ್ ಸಿಎ ದೇವಾನಂದ್ ಹಲವರು ಉಪಸ್ಥಿತರಿದ್ದರು.

WhatsApp Image 2024 10 10 at 3.54.10 PM
WhatsApp Image 2024 10 10 at 3.54.38 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X