ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3 ಫೇಸ್ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.
ಗ್ರಾಮಾಂತರ ಪ್ರದೇಶಗಳಿಗೆ ಸತತ 7 ಗಂಟೆ 3ಫೇಸ್ ವಿದ್ಯುತ್, ಟಿಸಿಗಳ ಸ್ವಯಂ ಆರ್ಥಿಕ ಯೋಜನೆ ಕೈ ಬಿಡುವುದು, ಸುಟ್ಟುಹೋದ ಟಿಸಿಗಳನ್ನು ತಕ್ಷಣವೇ ಬದಲಾವಣೆ ಮಾಡಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಎಚ್.ಆರ್. ಬಸವರಾಜಪ್ಪನವರ ನೇತೃತ್ವದಲ್ಲಿ ರೈತರು ಶಿವಮೊಗ್ಗ ಕೆ.ಇ.ಬಿ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಆರ್.ವೀರೇಂದ್ರರವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.
ಕೆ.ಇ.ಬಿ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಆರ್.ವೀರೇಂದ್ರ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದ್ದಾರೆ ಎಂದು ಪ್ರತಿಭಟನಾನಿರತರು ಮಾಹಿತಿ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಶಿವಮೊಗ್ಗ ತಾಲೂಕು ಅಧ್ಯಕ್ಷ ಸಿ.ಚಂದ್ರಪ್ಪ, ತಾಲೂಕು ಕಾರ್ಯದರ್ಶಿ ಶಿವಮೂರ್ತಿ ಹಾಗೂ ರೈತರು ಹಾಜರಿದ್ದರು.
