ಶಿವಮೊಗ್ಗ | ವಿವಿಗಳಲ್ಲಿ ನಡೆಯುವ ಸಂಶೋಧನೆಗಳನ್ನು ರೈತರು ಬಳಸಿಕೊಳ್ಳಬೇಕು: ಬಸವರಾಜಪ್ಪ

Date:

Advertisements

ಕೃಷಿಗೆ ಸಂಬಂಧಿಸಿ ವಿಶ್ವವಿದ್ಯಾಲಯಗಳಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ರೈತರು ಅವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ ಕರೆ ನೀಡಿದರು.

ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಹಮ್ಮಿಕೊಂಡಿದ್ದ ಕೃಷಿ-ತೋಟಗಾರಿಕಾ ಮೇಳ-2024 ರ ಮೊದಲ ದಿನವಾದ ಇಂದು ತಾಂತ್ರಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

WhatsApp Image 2024 10 18 at 7.06.09 PM

“ಇವತ್ತು‌ ವಿಶ್ವವಿದ್ಯಾಲಯದವರು ಕೃಷಿಮೇಳದಲ್ಲಿ ತಾಂತ್ರಿಕ ಸಮಾವೇಶವನ್ನು ಹಮ್ಮಿಕೊಂಡಿರುವುದು ಸಂತಸದ ಸಂಗತಿ. ಪೌಷ್ಟಿಕ ಆಹಾರವನ್ನು ನಾವು ಊಟ ಮಾಡಬೇಕು. ಜೊತೆಯಲ್ಲಿರುವವರಿಗೂ ಕೊಡುವ ಕೆಲಸ ಮಾಡಬೇಕು. ಹಿಂದಿನ ಒಕ್ಕಲುತನದಲ್ಲಿನ ಕೃಷಿ ಜ್ಞಾನವನ್ನ ಬಳುವಳಿಯಾಗಿ ಪಡೆದುಕೊಂಡು ಸುಸ್ಥಿರ ಕೃಷಿ ಮಾಡುತ್ತಿದ್ದೇವು. ಕೃಷಿ ಸಂಸ್ಕೃತಿಯನ್ನ ಸಂತೋಷದಿಂದ ಮಾಡುತ್ತಾ ಒಳ್ಳೆಯ ಆಹಾರವನ್ನು ನೀಡುತ್ತಿದ್ದೆವು. ರಾಸಾಯನಿಕ, ಕೀಟನಾಶಕ ಉಪಯೋಗಿಸದೆ ಬೆಳೆ ಬೆಳೆಯುತ್ತಿದ್ದೆವು. ಆದರೆ ಇತ್ತೀಚಿನ ದಿನಗಳಲ್ಲಿ ದೇಶದ ಜನತೆಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೈಬ್ರೀಡ್ ತಳಿಗಳನ್ನ ಪರಿಹಾರವಾಗಿ ಕಂಡುಕೊಂಡು ಬಿಟ್ಟಿರುವುದು ದುರ್ದೈವ ಎಂದರು.

Advertisements

ಸರ್ಕಾರಗಳು ಹೈಬ್ರಿಡ್ ತಳಿಗಳನ್ನ ಪರಿಹಾರವಾಗಿ ಕಂಡುಕೊಟ್ಟು ಅದಕ್ಕೆ ಬೇಕಾದ ಸವಲತ್ತುಗಳನ್ನು ಕೊಟ್ಟರು. ನಾವು ಬೆಳೆ ಬೆಳೆದೆವು, ಇದರಿಂದ ನಮ್ಮ ಆರೋಗ್ಯದ ಜೊತೆಗೆ ದೇಶದ ಜನರ ಆರೋಗ್ಯ ಕೆಡಲು ಶುರುವಾಯಿತು. ಈಗ ಮತ್ತೆ ನಾವು ಹಿಂದಿನ ಪದ್ದತಿಯ ಕಡೆ ತಿರುಗಿ ನೋಡುತ್ತಿದ್ದೇವೆ. ಸಾವಯವ ಕೃಷಿ ಅನುಸರಿಸುವ ಬಗ್ಗೆ ಮುಖ ಮಾಡುತ್ತಿದ್ದೇವೆ. ರೈತರು ಬೆಳೆ ಬೆಳೆಯುವ ವಿಧಾನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇಂತಹ ತಾಂತ್ರಿಕ ಸಮಾವೇಶಗಳ ಮೂಲಕ ಪಡೆದುಕೊಳ್ಳಬೇಕು ಎಂದು ಹೆಚ್.ಆರ್ ಬಸವರಾಜಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಕುಲಪತಿಗಳಾದ ಜಗದೀಶ್, ಸಂಪನ್ಮೂಲ ವ್ಯಕ್ತಿಗಳಾದ ಡಾ. ವಿನಾಯಕ ಹೆಗ್ಡೆ, ಎ ಬಿ ಪಾಟೀಲ್, ಶ್ರೀಕಾಂತ್ ಬರುವೆ, ಮಲ್ಲಿಕಾರ್ಜುನ ಯಲವಟ್ಟಿ ಮೊದಲಾದವರು ಹಾಜರಿದ್ದರು.

WhatsApp Image 2024 10 18 at 7.06.09 PM 1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X