ಶಿವಮೊಗ್ಗ | ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ ಬೆಂಕಿ ಅವಘಡ; ವ್ಯಾಪಾರಸ್ಥರಿಗೆ ಶೀಘ್ರ ನಷ್ಟ ಪರಿಹಾರ ನೀಡಲು ಆಗ್ರಹ

Date:

Advertisements

ಶಿವಮೊಗ್ಗದ ಗಾಂಧಿಬಜಾರ್‌ನ ಎರಡನೇ ತಿರುವಿನಲ್ಲಿರುವ ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿರುವ ಸ್ಟಾಲ್‌ಗಳಲ್ಲಿ ಕಳೆದ ಸೋಮವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ, ಏಳಕ್ಕೂ ಹೆಚ್ಚು ಅಂಗಡಿಗಳಿಗೆ ನಷ್ಟವುಂಟಾಗಿತ್ತು. ಈ ವ್ಯಾಪಾರಿಗಳಿಗೆ ಪರಿಹಾರ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಅಗ್ನಿಶಾಮಕ ಸಿಬ್ಬಂದಿಯ ಸಾಹಸದಿಂದಾಗಿ 200ಕ್ಕೂ ಹೆಚ್ಚು ಸ್ಟಾಲ್‌ ಮಾದರಿ ಅಂಗಡಿಗಳಿರುವ ಬಟ್ಟೆ ಮಾರ್ಕೆಟ್‌ನಲ್ಲಿ ದೊಡ್ಡ ದುರಂತ ಸಂಭವಿಸುವುದು ತಪ್ಪಿತ್ತು. ಸೋಮವಾರ ರಾತ್ರಿ 9:30ರ ಸುಮಾರಿಗೆ ಮುಚ್ಚಿದ್ದ ಮಳಿಗೆಗಳಿಂದ ಹೊಗೆ ಬರುವುದನ್ನ ಗಮನಿಸಿದ ಯುವಕರು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಮೂಲಕ ದೊಡ್ಡಮಟ್ಟದ ಅವಘಡವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದರು.

Advertisements

ಘಟನೆ ನಡೆದ ಸ್ಥಳಕ್ಕೆ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ಮತ್ತು ತಹಶೀಲ್ದಾರ್ ಮತ್ತು ಮಹಾನಗರ ಪಾಲಿಕೆ ಆಯುಕ್ತರು,ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಯೋಗೇಶ್ ಕೂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ರಾಘವೇಂದ್ರ 1
ರಾಘವೇಂದ್ರ, ಬಟ್ಟೆ ಮಾರುಕಟ್ಟೆ ಜವಳಿ ವ್ಯಾಪಾರ ಸಂಘದ ಪ್ರಧಾನ ಕಾರ್ಯದರ್ಶಿ

“ಅತೀ ಹೆಚ್ಚು ಬಡ ಮಧ್ಯಮ ವರ್ಗದ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಿರುವ ಕಾರಣ ಸೋಮವಾರದ ಘಟನೆಯಿಂದ ಕಂಗಾಲಾಗಿದ್ದು ತಕ್ಷಣ ಪರಿಹಾರ ಒದಗಿಸಿ ಕೊಡಬೇಕು. ಉಸ್ತುವಾರಿ ಸಚಿವರು ಸಾಧ್ಯವಾದಷ್ಟು ಬೇಗ ನಮಗೆ ಪರಿಹಾರ ಒದಗಿಸಿಕೊಡಬೇಕು” ಎಂದು ಬಟ್ಟೆ ಮಾರುಕಟ್ಟೆ ಜವಳಿ ವ್ಯಾಪಾರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಈ.ದಿನ.ಕಾಮ್ ಮೂಲಕ ಅಗ್ರಹಿಸಿದರು.

ಜೆಡಿಎಸ್ 4
ಜೆಡಿಎಸ್ ಮುಖಂಡ ಪ್ರಸನ್ನ ಕುಮಾರ್

ಜೆಡಿಎಸ್ ಮುಖಂಡರಾದ ಪ್ರಸನ್ನ ಕುಮಾರ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಇಲ್ಲಿ ಬಡ ಮಧ್ಯಮ ವರ್ಗದ ವ್ಯಾಪಾರಸ್ಥರು ಹೆಚ್ಚಾಗಿ ವ್ಯಾಪಾರ ಮಾಡುತ್ತಿದ್ದಾರೆ. ಈ ಪ್ರದೇಶವು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬರುವ ಕಾರಣ ಇವರುಗಳಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು. ವ್ಯಾಪಾರ ಮಾಡುತ್ತಿರುವ ಸ್ಥಳವನ್ನು ಹೊಸದಾಗಿ ನೂತನ ಕಟ್ಟಡ ರೀತಿಯಲ್ಲಿ ಬದಲಾವಣೆ ಮಾಡಬೇಕು” ಎಂದು ಒತ್ತಾಯಿಸಿದರು. ವ್ಯಾಪಾರಸ್ಥರ ಅಳಲು ಆಲಿಸಿ, ಸಾಂತ್ವನ ಹೇಳಿದರು.

ಬೆಂಕಿ 8

ಸ್ಥಳೀಯ ವ್ಯಾಪಾರಸ್ಥ ಮಸ್ತಾನ್ ಮಾತನಾಡಿ, “ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿ ತುಂಬಾ ಇಕ್ಕಟ್ಟಿನಿಂದ ವ್ಯಾಪಾರ ಮಾಡುತ್ತಿದ್ದೇವೆ. ಸರಿಯಾದ ವ್ಯವಸ್ಥೆ ಇಲ್ಲ. ಹೊಸದಾಗಿ ಒಂದು ಕಾಂಪ್ಲೆಕ್ಸ್ ರೀತಿಯಲ್ಲಿ ಕಟ್ಟಡವನ್ನು ಮಹಾನಗರ ಪಾಲಿಕೆ ವತಿಯಿಂದ ಮಾಡಿ, ಅಲ್ಲಿ ಅನುಕೂಲ ಮಾಡಿಕೊಟ್ಟರೆ ಇನ್ನೂ ಉತ್ತಮವಿತ್ತು. ಜನರು ಕೂಡ ಬರುವಂತಹ ಸ್ಥಳವಾಗಿದ್ದರೆ ಉತ್ತಮ” ಎಂದು ತಿಳಿಸಿದರು.

 

shimoga 1
ಬೆಂಕಿ 1 2 ಬೆಂಕಿ 3 1
ಭಾರದ್ವಾಜ್
ರಾಘವೇಂದ್ರ, ಶಿವಮೊಗ್ಗ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X