ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಿದೆ.
ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಇ ಗವರ್ನೆನ್ಸ್ನ ಸಿಇಒ ಆಗಿ ನೇಮಿಸಿದೆ. ಇವರು 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಹೊಸ ಜಿಲ್ಲಾಧಿಕಾರಿ ಬಗ್ಗೆ 3 ಪ್ರಮುಖಾಂಶ
ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.
ಪಿಯುಸಿವರೆಗೆ ಧಾರವಾಡ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2014ರಲ್ಲಿ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಪಾಸಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮೂಲಸೌಕರ್ಯ ಪೂರೈಕೆಗೆ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಆಗ್ರಹ
ಬೀದರ್ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಕೊಪ್ಪಳದ ಉಪ ವಿಭಾಗಾಧಿಕಾರಿಯಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಮೈಸೂರು ಮಹಾನಾಗರ ಪಾಲಿಕೆ ಆಯುಕ್ತರಾಗಿ ಹಾಗೂ 2022ರಲ್ಲಿ ಧಾರವಾಡದ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು.