ಶಿವಮೊಗ್ಗ | ಗುಡುಗು ಸಹಿತ ಭಾರೀ ಮಳೆ; ಹೈರಾಣಾದ ಜನರು

Date:

Advertisements

ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಪರಿಣಾಮ, ನಗರದ ಜನರು ಹೈರಾಗಿದ್ದಾರೆ.

ನಗರದ ಆಲ್ಕೊಳದಲ್ಲಿರುವ ಎಸ್.ಹೆಚ್ ಲೇಔಟ್‌ನ ಕೆರೆ ಸಂಪೂರ್ಣವಾಗಿ ತುಂಬಿದೆ. ಕೆರೆ ನೀರು ಕೋಡಿ ಬಿದ್ದು, ಲೇಔಟ್‌ಗೆ ನೀರು ನುಗ್ಗಿದೆ. ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ.

ಗೋಪಾಳದ ‘ಸಿ ಬ್ಲಾಕ್’ ಮತ್ತು ಶಿಪುರದ ತಮಿಳು ಕ್ಯಾಂಪ್‌ನಲ್ಲಿ ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ಲಕ್ಕಿನಕೊಪ್ಪ ಸರ್ಕಲ್ ಬಳಿಯಿರುವ ಹೊಸಕೆರೆ ಕೂಡ ಕೋಡಿ ಬಿದಿದ್ದು, ರಸ್ತೆಯಲ್ಲಿ ಹೆಚ್ಚಿನ ನೀರು ಹರಿಯುತ್ತಿದೆ. ಪರಿಣಾಮ, ಬಸ್ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಕೆಲಸಕ್ಕೆ ಹೋಗುವರು ತೊಂದರೆ ಅನುಭವಿಸುವಂತಾಗಿದೆ.

Advertisements

ಆರ್.ಎಲ್ ನಗರ, ಟಿಪ್ಪು ನಗರ, ಮಂಜುನಾಥ ಬಡಾವಣೆ, ಇಮಾಮ್ ಬಡಾವಣೆಯಲ್ಲಿ ಮಳೆಯು ಸಾಕಷ್ಟು ಸಂಕಷ್ಟ ತಂದೊಡ್ಡಿದೆ. ಚರಂಡಿಗಳು ಉಕ್ಕಿ ಹರಿಯುತ್ತಿದ್ದು, ಕೊಳಚೆ ನೀರು ಮಳೆ ನೀರಿನೊಂದಿಗೆ ರಸ್ತೆಯಲ್ಲಿ ಹರಿಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರ, ಭದ್ರಾವತಿ, ಸಾಗರ, ಹೊಸನಗರ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಭಾನುವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X