ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ, ಇಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ʼಕ್ಷೇತ್ರದ ರಕ್ಷಣೆ ನನ್ನದು’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು.

ಸಾಗರ ವಿಧಾನಸಭಾ ಕ್ಷೇತ್ರದ ತುಮರಿ, ಬ್ಯಾಕೋಡು, ಎಸ್‌ ಎಸ್ ಭೋಗ್, ಹೆರಬೆಟ್ಟು, ಅರಳಗೋಡು, ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಮಲೆನಾಡಿನ ಜನರ ಒಡಲ ಸಂಕಟವನ್ನು ಹತ್ತಿರದಿಂದ ಆಲಿಸುವ ಅವಕಾಶ ನನಗೆ ದೊರಕಿದೆ. ಇಲ್ಲಿನ ಸಮಸ್ಯೆಗಳ ಅಂತರಾಳ ಕೂಡ ಅರಿವಿಗೆ ಬಂದಿವೆ. ಇಲ್ಲಿ, ಕುಡಿಯುವ ನೀರು, ಬಗರ್ ಹುಕುಂ ಸಮಸ್ಯೆ, ಭೂ-ಹಕ್ಕು, ರಸ್ತೆ, ಸಾರಿಗೆ ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಜನರು ಅಳಲು ತೋಡಿಕೊಂಡಿದ್ದಾರೆ. ಆದ್ದರಿಂದ, ಇಲ್ಲಿ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿ ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ” ಎಂದರು.

Advertisements

“ಕಳೆದ 15 ವರ್ಷದ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಸ್ಥಿತಿ-ಗತಿಯನ್ನೇ ಉನ್ನತ ಸ್ಥಾನಕ್ಕೆ ಏರಿಸಬಹುದಾಗಿತ್ತು. ಕೇಂದ್ರದ ಹಂತದಲ್ಲಿ ಅನೇಕ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿತ್ತು. ಆದರೂ, ಅದು ಸಾಧ್ಯವಾಗದಿರುವುದು ಆಶ್ಚರ್ಯ ಮೂಡಿಸುತ್ತದೆ” ಎಂದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ, ಸ್ಥಳೀಯ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು” ಎಂದು ಹೇಳಿದರು.

“ಜಿಲ್ಲೆಯಲ್ಲಿ ಸಚಿವ ಮಧುಬಂಗಾರಪ್ಪ ಅವರು ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಅದಕ್ಕೆ ಅನೇಕ ಹಿರಿಯ ನಾಯಕರು ಕೈ ಜೋಡಿಸಿದ್ದಾರೆ. ಅದೇ ರೀತಿ, ಕೇಂದ್ರದ ಹಂತದಲ್ಲಿ ಸಮಸ್ಯೆ ಪರಿಹರಿಸಲು ಹೆಚ್ಚು ಒತ್ತು ನೀಡುತ್ತೇನೆ” ಎಂದು ಭರವಸೆ ನೀಡಿದರು‌.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತ‌ನಾಡಿ, “ಕ್ಷೇತ್ರದಲ್ಲಿ ರೈತರ ಕೃಷಿ ಚಟುವಟಿಕೆ ಸೇರಿದಂತೆ, ಕುಡಿಯುವ ನೀರಿನ ಸಮಸ್ಯೆ ವ್ಯತಿರಿಕ್ತ ಹಂತ ತಲುಪಿದೆ. ಮುಂದಿನ ದಿನದಲ್ಲಿ ಶರಾವತಿ ನದಿ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು‌. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಇಲ್ಲಿ, ಬಿಪಿಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ ಹರಸಬೇಕು” ಎಂದು ಕೋರಿದರು.

“ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪತ್ನಿ ಗೀತಾಗೆ ಕ್ಷೇತ್ರದ ಜನರು ಅವಕಾಶ ಕಲ್ಪಿಸಿಕೊಡಬೇಕು” ಎಂದರು. ‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

“ಮಲೆನಾಡಿನ ಸಮೃದ್ಧ ಹಸಿರು, ಗೀತಾಗೆ ಉಸಿರಾಗಬೇಕು. ಇದಕ್ಕೆ ಕ್ಷೇತ್ರದ ಮತದಾರರು ಆಶೀರ್ವದಿಸಬೇಕು. ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಹಾದಿಯಲ್ಲಿ ಸಾಗಲು ಗೀತಾಗೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕು” ಎಂದು ಮನವಿ ಮಾಡಿದರು.

ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ ಟಿ ಸತ್ಯನಾರಾಯಣ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಅಶೋಕ್ ಬೇಳೂರು, ಪ್ರಭಾವಾತಿ ಚಂದ್ರಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಂಕಾರ ಮುರಕ್ಕಿ, ಶ್ರೀದೇವಿ ರಾಮಚಂದ್ರ, ಪ್ರೇಮಾ ಸಂತೋಷ್, ರಘುಪತಿ ಹೋನಗೋಡು, ಸಂತೋಷ ಶೆಟ್ಟಿ, ಸುಧಾಕರ ಮಾವಿನಕೈ, ಆನಂದ ಬಾಳ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X