ಶಿವಮೊಗ್ಗ | ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆಬಿಪಿ ವಾಗ್ದಾಳಿ

Date:

Advertisements

ಸರ್ಕಾರದಲ್ಲಿ ತನ್ನ ಭಾಗ್ಯಗಳನ್ನ ಪೂರ್ತಿ ಮಾಡಲು ಹಣವಿಲ್ಲದ ಕಾರಣ ಪೊಲೀಸರಿಗೆ ಟಾರ್ಗೆಟ್ ನೀಡಿದೆ. ಜನರಿಂದ ಹಣ ವಸೂಲಿ ಮಾಡಲು ಪೊಲೀಸರನ್ನು ಬಿಟ್ಟಿದ್ದಾರೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಕೆ ಬಿ ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸರ್ಕಾರದ ವಿರುದಧ ನವೆಂಬರ್‌ 22ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಮಾಜಿ ಶಾಸಕ ಕಡಿದಾಲ್ ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. “ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಹಿಂದೆ ಸೌಲತ್ತುಗಳನ್ನು ನೀಡಿದ್ದು, ಇದೀಗ ಸರ್ಕಾರ ಇದನ್ನೂ ದಂಧೆಯನ್ನಾಗಿ ಮಾಡಿಕೊಂಡಿದೆ” ಎಂದು ಟೀಕಿಸಿದರು.

“ಸಾರ್ವಜನಿಕರನ್ನು ಬದಕಲು ಬಿಡಿ, ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳಬೇಡಿ. ಸರ್ಕಾರಕ್ಕೆ ಎಲ್ಲೋ ಒಂದು ಭಯ ಕಾಡುತ್ತಿರುವ ಕಾರಣ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ. ಪ್ರಮುಖವಾಗಿ ತೀವ್ರ ಬರಗಾಲ ರೈತರು ಮತ್ತು ಜನರನ್ನು ಕಿತ್ತು ತಿನ್ನುತ್ತಿದ್ದು, ಇಂತಹ ಸಮಯದಲ್ಲಿ ಸರ್ಕಾರದ ಕೆಲಸಗಳು ಕೇವಲ ಪ್ರೆಸ್ ನೋಟ್‌ನಲ್ಲಿ ಮಾತ್ರ ಕಾಣ ಸಿಗುತ್ತಿವೆ” ಎಂದು ಆರೋಪಿಸಿದರು.

Advertisements

“ಈ ಮೊದಲು ರೈತರಿಗೆ ವಿದ್ಯುತ್ ಸಂಪರ್ಕ ಉಚಿತವಾಗಿತ್ತು. ಆದರೆ ಈಗ ರೈತರು ಇದಕ್ಕಾಗಿ ₹3.5 ರಿಂದ ₹4 ಲಕ್ಷದವರೆಗೂ ಖರ್ಚು ಮಾಡಬೇಕಾಗಿದೆ. ಇದು ಬರಗಾಲದ ಸಮಯದಲ್ಲಿ ರೈತರಿಗೆ ಸರ್ಕಾರ ಕೊಟ್ಟಿರುವ ಕೊಡುಗೆ ಆಗಿದೆ” ಎಂದು ವ್ಯಂಗ್ಯವಾಡಿದ್ದು, ಇದಕ್ಕೆ ಸರ್ಕಾರ ನೀಡುತ್ತಿರುವ ಸಬೂಬು ಏನೆಂದರೆ ʼಮುಂದಿನ ದಿನಗಳಲ್ಲಿ ಸೋಲಾರ್ ವ್ಯವಸ್ಥೆ ಮಾಡುವವರೆಗೆ ಇದು ಇರತ್ತೆʼ ಎನ್ನುತ್ತಿದೆ” ಎಂದರು.

ಈ ಸಂದರ್ಭದಲ್ಲಿ ದೀಪಕ್ ಸಿಂಗ್, ಗೋವಿಂದಪ್ಪ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X