ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್

Date:

Advertisements

ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ಬಳಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ನಡೆದಿದೆ.

ಘಟನೆಯಿಂದಾಗಿ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲಾಗದೆ ಪ್ರಯಾಣಿಕರು ತುರ್ತು ನಿರ್ಗಮನ ಕಿಟಕಿಯಿಂದ ಇಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಈ ಸಂದರ್ಭದಲ್ಲಿ ಬಿಬಿ ರಸ್ತೆಯ ನಿವಾಸಿ ಸುಬ್ರಹ್ಮಣ್ಯ ಎನ್ನುವವರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದು ಅವರಿಗೂ ಬಸ್ ತಾಗಿದ್ದರಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ. ಬಸ್ಸಿನ ಬಾಗಿಲು ನಜ್ಜುಗುಜ್ಜು ಆದರೂ ಸಹ ಚಾಲಕ ಪ್ರಯಾಣಿಕರನ್ನು ಅಲ್ಲಿಯೇ ಇಳಿಸಿ, ನೇರವಾಗಿ ಕೆಎಸ್ಆರ್‌ಟಿಸಿ ಡಿಪೋಗೆ ಬಸ್ ಚಾಲನೆ ಮಾಡಿಕೊಂಡು ಹೋಗಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

Advertisements

ಇದನ್ನು ಓದಿದ್ದೀರಾ? ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಚಾಲಕ ಕುಡಿದಿರಬಹುದು ಎಂದು ಪ್ರಯಾಣಿಕರು ಕೆಲವರು ಮಾತನಾಡಿದರೆ, ಇನ್ನು ಕೆಲವರು ಚಾಲಕ ಹೊಸಬನಾಗಿದ್ದರಿಂದ ಈ ರೀತಿ ನಡೆದುಕೊಂಡಿರುವುದಾಗಿ ಆರೋಪಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X