ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ಬಳಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ನಡೆದಿದೆ.
ಘಟನೆಯಿಂದಾಗಿ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲಾಗದೆ ಪ್ರಯಾಣಿಕರು ತುರ್ತು ನಿರ್ಗಮನ ಕಿಟಕಿಯಿಂದ ಇಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಈ ಸಂದರ್ಭದಲ್ಲಿ ಬಿಬಿ ರಸ್ತೆಯ ನಿವಾಸಿ ಸುಬ್ರಹ್ಮಣ್ಯ ಎನ್ನುವವರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದು ಅವರಿಗೂ ಬಸ್ ತಾಗಿದ್ದರಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ. ಬಸ್ಸಿನ ಬಾಗಿಲು ನಜ್ಜುಗುಜ್ಜು ಆದರೂ ಸಹ ಚಾಲಕ ಪ್ರಯಾಣಿಕರನ್ನು ಅಲ್ಲಿಯೇ ಇಳಿಸಿ, ನೇರವಾಗಿ ಕೆಎಸ್ಆರ್ಟಿಸಿ ಡಿಪೋಗೆ ಬಸ್ ಚಾಲನೆ ಮಾಡಿಕೊಂಡು ಹೋಗಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನು ಓದಿದ್ದೀರಾ? ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆ
ಚಾಲಕ ಕುಡಿದಿರಬಹುದು ಎಂದು ಪ್ರಯಾಣಿಕರು ಕೆಲವರು ಮಾತನಾಡಿದರೆ, ಇನ್ನು ಕೆಲವರು ಚಾಲಕ ಹೊಸಬನಾಗಿದ್ದರಿಂದ ಈ ರೀತಿ ನಡೆದುಕೊಂಡಿರುವುದಾಗಿ ಆರೋಪಿಸಿದ್ದಾರೆ.
