ಶಿವಮೊಗ್ಗ | ಭದ್ರಾವತಿಯನ್ನ ರಿಪಬ್ಲಿಕ್ ಆಗಲು ಬಿಡಲ್ಲ: ಸಚಿವ ಮಧು ಬಂಗಾರಪ್ಪ

Date:

Advertisements

ಶಿವಮೊಗ್ಗದಲ್ಲಿ ಏನೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೂ ಅದನ್ನು ಸರಿಪಡಿಸಲಾಗುವುದು. ಆದರೆ ಭದ್ರಾವತಿಯನ್ನು ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಭದ್ರಾವತಿ ರಿಪಬ್ಲಿಕ್ ಎಂದು ಮಾಧ್ಯಮದವರು ಕರೆಯುತ್ತಿದ್ದಾರೆ. ಆದರೆ ರಿಪಬ್ಲಿಕ್‌ ಆಗಲು ಬಿಡಲ್ಲ. ಪೊಲೀಸ್‌ ಇಲಾಖೆ ನಿಷ್ಕ್ರಿಯಗೊಳ್ಳಲು ಬಿಡುವುದಿಲ್ಲ ಎಂದು ಪುನರುಚ್ಛರಿಸಿದರು. ಭದ್ರಾವತಿಯಲ್ಲಿ ಇಸ್ಪೀಟು, ಅಕ್ರಮ ಮರಳುಗಾರಿಕೆ, ಜೂಜಾಟಗಳಂತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಅನುಮಾನಸ್ಪದ ಸಾವು, ಆತ್ಮಹತ್ಯೆ ಕೊಲೆ ಪ್ರಕರಣಗಳಂತಹ ಆತಂಕಕಾರಿ ಘಟನೆಗಳು ನಡೆಯುತ್ತಿದ್ದು, ಶೀಘ್ರವೇ ಎಲ್ಲಾ ಚಟುವಟಿಕೆಗೆ ಬ್ರೇಕ್ ಹಾಕಲಾಗುವುದು ಎಂದರು. 

ಕುಪ್ಪಳಿಯಲ್ಲಿ ಕುವೆಂಪು ಪ್ರತಿಷ್ಠಾನವು ಅದ್ದೂರಿ ಮದುವೆಗೆ ಅನುವು ಮಾಡಿಕೊಟ್ಟಿದೆ. ಅದನ್ನ ವಿಚಾರಿಸಿ ಕ್ರಮ ಜರುಗಿಸಲಾಗುವುದು. ಚಂದ್ರಗುತ್ತಿಯಲ್ಲಿ ಪ್ರಾಧಿಕಾರ ಮತ್ತು ಗುಡವಿಯಲ್ಲಿ ಪ್ರವಾಸೋದ್ಯಮಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲಮಪ್ರಭು ಫ್ರೀಡಂ ಪಾರ್ಕ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮದವರ ಹಲವು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ l ಯೋಗ, ಧ್ಯಾನದಿಂದ ಮಕ್ಕಳು ಕ್ರಿಯಾಶೀಲರಾಗುತ್ತಾರೆ; ಆರ್ ಕೃಷ್ಣಪ್ಪ 

ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಅವರ ಚೋಟಾ ಸಹಿಯನ್ನ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಮತ್ತೊಬ್ಬ ಬಿಜೆಪಿ ನಾಯಕ ಶ್ರೀರಾಮುಲು ಕಾಂಗ್ರೆಸ್ ಪಕ್ಷ ಸೇರ್ಪಡೆ ಎನ್ನುವ ಗುಮಾನಿಗೆ ಉತ್ತರಿಸಿದ ಅವರು, ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X