ಶಿವಮೊಗ್ಗ | ಸಚಿವ ಮಧು ಬಂಗಾರಪ್ಪರ ಮಾತು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕ : ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ. ಖಂಡನೆ

Date:

Advertisements

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ಸಂಸದ ಬಿ.ವೈ. ರಾಘವೇಂದ್ರ ಪೋಸ್ಟ್ ಮ್ಯಾನ್ ಸಂಸದ ಎಂದು ಹೇಳಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ. ಇವರ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್ ಕೆ ಜಗದೀಶ್ ಹೇಳಿದ್ದಾರೆ.

ಸಂಸದ ಬಿ ವೈ ರಾಘವೇಂದ್ರ ಇವರು ಜಿಲ್ಲೆಯ ಅಭಿವೃದ್ಧಿ ಹರಿಕಾರರಾಗಿದ್ದಾರೆ. ವಿಮಾನ ನಿಲ್ದಾಣ, ರಿಂಗ್ ರಸ್ತೆಗಳು. ಮೇಲ್ಲೇತುವೆಗಳು, ಸಿಗಂದೂರು ಚೌಡೇಶ್ವರಿ ಸೇತುವೆ, ರೈಲ್ವೆಗಳ ಅಭಿವೃದ್ಧಿ, ರಸ್ತೆ ಸೇರಿದಂತೆ ಇನ್ನೂ ಅನೇಕ ಮೂಲಭೂತ ಸೌಕರ್ಯಗಳ ಬಗ್ಗೆ ಕೇಂದ್ರ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ನಿಷ್ಠೆ-ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ.

ಇಂತಹ ಜನಪರವಾದ ಕೆಲಸಗಳನ್ನು ನೋಡಿ ಪಾಪ ಸಚಿವ ಮಧು ಬಂಗಾರಪ್ಪನವರಿಗೆ ತಡೆದುಕೊಳ್ಳಲಾಗದೆ ವಿನಾಕಾರಣ ಈ ಸಂಬಂಧ ಹೇಳಿಕೆಗಳನ್ನು ನೀಡುತ್ತಾ ನಾನಿನ್ನು ಜಿಲ್ಲೆಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಹೊರಟಿದ್ದಾರೆ.

Advertisements

ಸಿಗಂದೂರು ಚೌಡೇಶ್ವರಿ ಸೇತುವೆ ಉದ್ಘಾಟನೆಗೆ ಮೊದಲೇ ಕೇಂದ್ರ ಭೂಸಾರಿಗೆ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದರೂ ಸಹ ರಾಜಕೀಯ ಕಾರಣಗಳಿಗಾಗಿ ಉದ್ಘಾಟನೆಗೆ ಬರದಿರುವುದು ಅವರ ಹದಪತನ ತೋರಿಸುತ್ತದೆ. ಇದರ ಹಿಂದೆ ಸಚಿವ ಮಧು ಬಂಗಾರಪ್ಪನವರ ಕೀಳು ರಾಜಕೀಯ ವರ್ತನೆ ಕೆಲಸ ಮಾಡಿದೆ ಎಂದಿದ್ದಾರೆ.

1001939885

ರಾಜ್ಯ ಸರ್ಕಾರ ಗ್ಯಾರಂಟಿಗೆ ಹಣ ಹೊಂದಿಸಲು ಸಣ್ಣಪುಟ್ಟ ಕ್ಯಾಂಟೀನ್, ಗೂಡಂಗಡಿ, ತರಕಾರಿ ಅಂಗಡಿಗಳವರೆಗೆ ಜಿಎಸ್‌ಟಿ ಟ್ಯಾಕ್ಸ್ ಕಟ್ಟಲು ನೋಟಿಸ್ ನೀಡಿದೆ. ಇದು ಕೇಂದ್ರ ಸರ್ಕಾರದ ನಿರ್ಧಾರವಲ್ಲ, ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿಯಾಗಿದೆ ಇದು ಗೊತ್ತಿದ್ದರೂ ಜನರ ಧಿಕ್ಕು ತಪ್ಪಿಸಲು ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸಲು ಹೊರಟಿದ್ದಾರೆ ಇದು ಖಂಡನೀಯ ಎಂದಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಕಳಿಸಿರುವ ನೋಟಿಸ್‌ಗಳನ್ನು ಕೂಡಲೇ ವಾಪಸ್ ಪಡೆಯಬೇಕು ಇಲ್ಲವಾದರೆ ಬಿಜೆಪಿಯಿಂದ ಹೋರಾಟ ನಡೆಸಲಾಗುವುದೆಂದು ಜಿಲ್ಲಾಧ್ಯಕ್ಷ ಎನ್. ಕೆ. ಜಗದೀಶ್ ಪತ್ರಿಕೆ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X