ಶಿವಮೊಗ್ಗ | ಅಗ್ನಿ ಅವಘಡ ಪ್ರಾತ್ಯಕ್ಷಿಕೆಯ ಅಣಕು ಪ್ರದರ್ಶನ

Date:

Advertisements

ಶಿವಮೊಗ್ಗದ ಅಗ್ನಿ ಶಾಮಕ ದಳದ ಠಾಣಾಧಿಕಾರಿ ನರೇಂದ್ರ ಅವರ ನೇತೃತ್ವದಲ್ಲಿ ಅಣಕು ಪ್ರದರ್ಶನದ ಮೂಲಕ ಶಾಲೆಯ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡದ ಬಗ್ಗೆ ಮಾಹಿತಿ ನೀಡಿದರು.

“ಮುಖ್ಯವಾಗಿ ಮನೆಗಳಲ್ಲಿ ಅಡುಗೆ ಅನಿಲ ಸೋರಿಕೆಯಾದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು. ಅಡುಗೆ ಅನಿಲದ ಒಲೆ ಮತ್ತು ಸಿಲಿಂಡರ್‌ಗೆ ಕನಿಷ್ಟ 2.5 ಅಡಿ ಅಂತರವಿರಬೇಕು. ಮತ್ತು ಸಿಲಿಂಡ‌ರ್ ಕಾಲಾವಧಿ ಅದರ ತುದಿಯಲ್ಲಿ ಎ.ಬಿ.ಸಿ.ಡಿ ಎಂದು ಹಾಕಿ ಇಸವಿ ನಮೂದಿಸಿರುತ್ತಾರೆ. ಅದನ್ನು ತಿಳಿದುಕೊಳ್ಳಬೇಕು. ಆ ಇಸವಿಯ ಒಳಗೆ ಮಾತ್ರ ಅದನ್ನು ಬಳಸಬೇಕು. ಒಂದು ವೇಳೆ ಸರಬರಾಜುದಾರರು ಅವಧಿ ಮುಗಿದ ಸಿಲಿಂಡ‌ರ್‌ಗಳನ್ನು ನೀಡಿದ್ದಲ್ಲಿ ನಿಮಗೆ ಅದರ ಅರಿವಿರಬೇಕು. ಅವಧಿ ಮುಗಿದ ಸಿಲಿಂಡ‌ರ್‌ಗಳನ್ನು ಕೂಡಲೇ ಹಿಂತಿರುಗಿಸಬೇಕು” ಎಂದು ಅಗ್ನಿ ಶಾಮಕ ದಳದ ಠಾಣಾಧಿಕಾರಿ ನರೇಂದ್ರ ತಿಳಿಸಿದರು.

ಪ್ರಮುಖವಾಗಿ ಶಾಲೆ ಕಾಲೇಜುಗಳು, ಸಿನಿಮಾ ಮಂದಿರಗಳು, ಹಾಸ್ಟೆಲ್‌ಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿ ವರ್ತಿಸಬೇಕು ಎಂಬುದನ್ನು ತಿಳಿಸಿದ ಅವರು ಕೂಡಲೇ 112ಕ್ಕೆ ಕರೆ ಮಾಡಿದರೆ ಅವಘಡ ಸಂಭವಿಸಿದ ಸ್ಥಳದ ಲೋಕೇಷನ್ ಸಹಿತ ಮಾಹಿತಿ ಅಗ್ನಿಶಾಮಕ ದಳಕ್ಕೆ ಸಿಗುತ್ತದೆ ಎಂದರು.

Advertisements

ಅಗ್ನಿಶಾಮಕ ದಳದಲ್ಲಿ ಅತ್ಯಾಧುನಿಕ ಸಲಕರಣೆಗಳು ಮತ್ತು ನುರಿತ ಸಿಬ್ಬಂದಿಗಳಿದ್ದಾರೆ. ನೀರು ಹಾಗೂ ಅಗ್ನಿ ಅವಘಡಗಳು ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯಾಚರಿಸಲು ಅಗ್ನಿಶಾಮಕ ದಳದಲ್ಲಿ ಎಲ್ಲ ರೀತಿಯ ಸೌಲಭ್ಯಗಳಿವೆ. ಇದರ ಅರಿವು ಪ್ರತಿಯೊಬ್ಬರಿಗೆ ಇರಬೇಕು. ಇದರಿಂದ ಅವಘಡ ತಪ್ಪಿಸಲು ಸಹಕಾರಿಯಾಗುತ್ತದೆಂದು ತಿಳಿಸಿದರು.

“ಬೆಂಕಿಯನ್ನು ನಂದಿಸಲು ಮೂರು ವಿಧಾನಗಳಿವೆ. ಅವುಗಳೆಂದರೆ ತಣಿಸುವಿಕೆ, ಮುಚ್ಚುವಿಕೆ ಮತ್ತು ಉರಿಯುವ ವಸ್ತು ಬೇರ್ಪಡಿಸುವ ಮೂಲಕ ಬೆಂಕಿ ನಂದಿಸಬಹುದು. ಅಗ್ನಿ ಅವಘಡಗಳನ್ನು ನಾಲ್ಕು ರೀತಿ ವಿಂಗಡನೆ ಮಾಡಬಹುದು *ಎ-ಕ್ಲಾಸ್ ಪೈರ್* : ಉರಿದು ಬೂದಿಯಾಗುವ ವಸ್ತುಗಳು ಉದಾ: ಕಟ್ಟಿಗೆ, ಪೇಪರ್, ಇತರೆ *ಬಿ-ಕ್ಲಾಸ್ ಪೈರ್* ಆಯಿಲ್ ಪದಾರ್ಥಗಳು ಪೆಟ್ರೋಲ್, ಡೀಸೆಲ್, ಆಯಿಲ್, ಇತರೆ *ಸಿ-ಕ್ಲಾಸ್ ಪೈರ್* ದ್ರವಗಳು, ಗ್ಯಾಸ್ ಪೈರ್ *ಡಿ-ಕ್ಲಾಸ್ ಪೈರ್* ಮೆಟಲ್ ಫೈರ್ ಎಲೆಕ್ಟ್ರಿಕಲ್ ಫೇರ್, ಹಾಗೂ ಬೆಂಕಿ ಹತ್ತಿದಾಗ ಯಾವ ಯಾವ ನಂದಕಗಳನ್ನು ಯಾವ ರೀತಿ ಬಳಸುತ್ತೇವೆಂದು ಎಲ್ಲ ಉಪಕರಣಗಳ ಪ್ರದರ್ಶನದ ಮೂಲಕ ಶಾಲಾ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಅಣಕು ಪ್ರದರ್ಶನದ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮದ್ಯದಲ್ಲಿ ಆ್ಯಸಿಡ್ ಬೆರೆಸಿ ಕುಡಿದ ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಶಿವಮೊಗ್ಗ ನಗರದ ಬಿಹೆಚ್ ರಸ್ತೆಯ ಕರ್ನಾಟಕ ಸಂಘ ಪಕ್ಕದ “ಮೇನ್ ಮಿಡ್ಲ್ ಸ್ಕೂಲ್” ಸರ್ಕಾರಿ ಪ್ರಧಾನ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಾಲಕಿಯರ ಪ್ರೌಢಶಾಲೆ, ಉರ್ದು ಪ್ರೌಢಶಾಲೆ, ತಮಿಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X