ಶಿವಮೊಗ್ಗ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಪಪೂ ಅತಿಥಿ ಉಪನ್ಯಾಸಕರ ಸಂಘ ಮನವಿ

Date:

Advertisements

ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಟ ₹30,000 ಹೆಚ್ಚಳ ಮಾಡುವಂತೆ ಹಾಗೂ ಅದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಮನವಿ ಸಲ್ಲಿಸಿತು.

“ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸುಮಾರು 4,659ಕ್ಕೂ ಹೆಚ್ಚು ಮಂದಿ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದು, ಮಾಸಿಕ ₹12,000 ದಂತೆ ವೇತನ ಪಡೆಯುತ್ತಿದ್ದಾರೆ. ಇಂದಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಸಿಗುವ ಸಂಬಳದಲ್ಲಿ ಜೀವನ ನಡೆಸುವುದೇ ಕಷ್ಟ. ಇನ್ನು ಅತಿಥಿ ಉಪನ್ಯಾಸಕರು ಬದುಕು ಕಟ್ಟಿಕೊಳ್ಳಲು ಸಾಧ್ಯವೇ? ಸಾಕಷ್ಟು ಸಮಸ್ಯೆಗಳನ್ನು ನಿಭಾಯಿಸುವುದರಲ್ಲಿ ಅತಿಥಿ ಉಪನ್ಯಾಸಕರ ಜೀವನದ ಎತ್ತಿನ ಬಂಡಿಯ ಹಗ್ಗ-ಜಗ್ಗಾಟ ಹಳ್ಳ ಹಿಡಿಯುತ್ತಿದೆ. ರಾಜ್ಯದ ನೂರಾರು ಕಾಲೇಜುಗಳು ಅತಿಥಿ ಉಪನ್ಯಾಸಕರಿಲ್ಲದೆ ನಡೆಯುವುದೇ ಕಷ್ಟ, ಕಾಲೇಜುಗಳಲ್ಲಿ ದ್ವಿತೀಯ ದರ್ಜೆ ಸಹಾಯಕನಿಗೆ ಕೊಡುವಂತ ಸಂಬಳಕ್ಕಿಂತಲೂ ಕಡಿಮೆ ವೇತನವನ್ನು ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಬದಲಾವಣೆ ತಂದು ಸಮಾಜದಲ್ಲಿ ಅತಿಥಿ ಉಪನ್ಯಾಸಕರೂ ಗೌರವಯುತ ಬದುಕು ನಡೆಸಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಲಾಯಿತು.

“ಹಲವು ವರ್ಷಗಳಿಂದ ಈ ಕುರಿತು ಹೋರಾಟಗಳ ಮೂಲಕ ಸಮಸ್ಯೆಗಳನ್ನು ಗಮನಕ್ಕೆ ತರಲಾಗಿದೆ. ಆದರೆ ಯಾವ ಸರ್ಕಾರವೂ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ರಾಜ್ಯದ ಅನೇಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅನೇಕ ಬೋಧನಾ ಹುದ್ದೆಗಳಿಗೆ ಖಾಯಂ ಉಪನ್ಯಾಸಕರು ಇಲ್ಲದೇ ಅತಿಥಿ ಉಪನ್ಯಾಸಕರಿಂದಲೇ ತರಗತಿಗಳು ನಡೆಯುತ್ತಿವೆ ಎಂಬುದನ್ನು ಮರೆಯುವಂತಿಲ್ಲ. ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸುವುದು ನ್ಯಾಯ ಸಮ್ಮತವಾಗಿದೆ. ಹಾಗಾಗಿ ಮುಂಬರುವ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು” ಎಂದು ಒತ್ತಾಯಿಸಲಾಯಿತು.

Advertisements

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ನಾಳೆ ವಿದ್ಯುತ್‌ ವ್ಯತ್ಯಯ; ಎಲ್ಲೆಲ್ಲಿ?

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಪದ್ಮಪ್ರಭ ಇಂದ್ರ, ಉಪಾಧ್ಯಕ್ಷ ರಾಜೇಶ್ ಭಟ್ ಪಿ, ಜಂಟಿ ಕಾರ್ಯದರ್ಶಿ ಎಸ್ ಜಿ ನಾಗರತ್ನ, ಅಶ್ವಿನಿ ಕೆ ಎಸ್‌, ಶಿಕ್ಷಣ ತಜ್ಞ ವಿ ಎನ್ ರಾಜಶೇಖರ್, ನಿವೃತ್ತ ಪ್ರಾಚಾರ್ಯ ಬೈರೇಗೌಡ, ಕಾರ್ಯಕಾರಿಣಿ ಸಮಿತಿ ಸದಸ್ಯ ಸುಧೀರ್ ಕುಮಾ‌ರ್, ಜಗದೀಶ್, ಸುಲತಾ, ಭರತ್ ಕುಮಾರ್, ತಾರಾಸಿಂಗ್, ಸತೀಶ್, ಸದಾಶಿವ ಮುರುಗೋಡು, ವಾಸು, ಗುರುರಾಜ್, ಮಮತಾ, ನಿತ್ಯಾನಂದ, ಶಂಕರ್ ಪೂಜಾರಿ, ಸುಮಿತ್ರಾ, ಲೋಕೇಶ್ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X