ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Date:

Advertisements

ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರಿಗೆ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಫೆಬ್ರವರಿ 24ರಂದು ತೀರ್ಪು ನೀಡಿದೆ.

ಸಾಗರ ಪಟ್ಟಣದ ನಿವಾಸಿಗಳಾದ ಅರುಣ ಯಾನೆ ಗೆಂಡೆ ಅರುಣ್(27), ಅಭಿಜಿತ್(28) ಹಾಗೂ ಇರ್ಫಾನ್‌(20) ಜೀವಾವಧಿ ಶಿಕ್ಷೆಗೊಳಗಾದವರು ಎಂದು ಗುರುತಿಸಲಾಗಿದೆ. ಮೂವರಿಗೆ ತಲಾ ₹10,000 ದಂಡ ವಿಧಿಸಿ ನ್ಯಾಯಾಧೀಶೆ ಪ್ರಭಾವತಿಯವರು ಈ ತೀರ್ಪು ನೀಡಿದ್ದಾರೆ.

1001280869

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯಕ್ ಜಿ ಅವರು ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ 2020ರ ಸೆಪ್ಟೆಂಬರ್‌ 12ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ಸಿರವಂತೆ ಗ್ರಾಮದ ನಿವಾಸಿಯಾದ 44 ವರ್ಷದ ಮಹಿಳೆಯೋರ್ವರ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿತ್ತು.

Advertisements
1001280874

ಕೊಲೆ ಮಾಡಿದ ಬಳಿಕ ಮಹಿಳೆಯ ಬಳಿಯಿದ್ದ ಬಂಗಾರದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಮೃತೆಯ ತಾಯಿ ನೀಡಿದ ದೂರಿನ ಮೇರೆಗೆ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 276/2020 ಐಪಿಸಿ ಕಲಂ 302 ರೀತ್ಯಾ ಪ್ರಕರಣ ದಾಖಲಾಗಿತ್ತು. ಅಂದಿನ ಸರ್ಕಲ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿ ಮೂವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ದಾಖಲಿಸಿದ್ದರು.

1001280873

ನ್ಯಾಯಾಲಯದ ತೀರ್ಪಿನ ಕುರಿತಂತೆ ಫೆಬ್ರವರಿ 24 ರಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X