ಶಿವಮೊಗ್ಗ | ಆಧಾರ್‌ ತಿದ್ದುಪಡಿಗೆ ಒಂದೇ ಕೇಂದ್ರ; ನಿತ್ಯವು ಪರದಾಡುತ್ತಿರುವ ಜನ

Date:

Advertisements

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್‌ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ, ಇದರಿಂದಾಗಿ ಸಾರ್ವಜನಿಕರು ನಿತ್ಯವೂ ಆಧಾರ್‌ ತಿದ್ದುಪಡಿಗಾಗಿ ಪರದಾಡುವಂತಾಗಿದೆ.

ಇಲ್ಲಿ ಇದೊಂದೇ ತಿದ್ದುಪಡಿ ಕೇಂದ್ರ ಇರುವುದರಿಂದ ಜನರ ಅಲೆದಾಟ ತಪ್ಪುತ್ತಿಲ್ಲ. ತಾಲೂಕು ಕಚೇರಿ, ನಾಡಕಚೇರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಈ ಹಿಂದೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಮುಖ್ಯ ಅಂಚೆ ಕಚೇರಿಯಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಒಬ್ಬ ಸಿಬ್ಬಂದಿ ನಿಯೋಜನೆಗೊಂಡಿದ್ದು ದಿನವೊಂದಕ್ಕೆ 30ಕ್ಕಿಂತ ಅಧಿಕ ತಿದ್ದುಪಡಿ ಸಾಧ್ಯವಾಗುತ್ತಿಲ್ಲ. ಸೌಲಭ್ಯ ವಂಚಿತರು ಅಂಗಲಾಚಿದರೂ ತಿದ್ದುಪಡಿಗೆ ಅವಕಾಶ ಸಿಗುತ್ತಿಲ್ಲ.

ಸಾರ್ವಜನಿಕರು ಬೆಳಿಗ್ಗೆ 6ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಕಚೇರಿ ತೆರೆಯುವುದರೊಳಗೆ ಆ ದಿನದ ತಿದ್ದುಪಡಿ ಕೋಟಾ ಮುಕ್ತಾಯಗೊಳ್ಳುತ್ತಿದೆ. ಹಳ್ಳಿಗಳಿಂದ ಮುಂಜಾನೆ ಬರಲು ಸಮರ್ಪಕ ಬಸ್‌ ಸೌಲಭ್ಯ ಇಲ್ಲದ ಕಾರಣ ಗ್ರಾಮೀಣ ಪ್ರದೇಶದ ಜನರು ಆಧಾರ್ ತಿದ್ದುಪಡಿಗೆ ತೊಂದರೆ ಎದುರಿಸುತ್ತಿದ್ದಾರೆ.

Advertisements

ವಿಳಾಸ, ಫೋಟೊ,‌ ಜನನ ಪ್ರಮಾಣಪತ್ರ, ಮೊಬೈಲ್‌ ಸಂಖ್ಯೆ, ಹೆಸರು ಬದಲಾವಣೆ, ಲಿಂಗ, ಬಯೊಮೆಟ್ರಕ್ ಸೇರಿದಂತೆ 10ವರ್ಷ ಮೇಲ್ಪಟ್ಟವರ ಎಲ್ಲಾ ಕಾರ್ಡ್‌ಗಳನ್ನು ನವೀಕರಿಸಬೇಕಿದೆ. ಇಲ್ಲದಿದ್ದರೆ ಪಡಿತರ ಸೌಲಭ್ಯ, ಗೃಹಲಕ್ಷ್ಮಿ ಯೋಜನೆ, ಉಚಿತ ಬಸ್‌, ಬ್ಯಾಂಕ್‌ ಖಾತೆ, ಪ್ಯಾನ್‌ ಕಾರ್ಡ್‌, ಮತದಾರರ ಚೀಟಿ ನವೀಕರಣ, ವ್ಯಾಸಂಗ ದೃಢೀಕರಣ ಮುಂತಾದ ಸೌಲಭ್ಯಗಳಿಂದ ವಂಚಿತರಾಗುವಂತಾಗುತ್ತಿದೆ.

ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ ಈಚೆಗೆ ತೆರೆದ ಕರ್ನಾಟಕ ಒನ್‌ ಕೇಂದ್ರ ಕೆಲಸ ಮಾಡುತ್ತಿಲ್ಲ. ತಾಲೂಕು ಆಡಳಿತದಲ್ಲೂ ಸಿಬ್ಬಂದಿ ಕೊರತೆ ಹೆಚ್ಚಿದ್ದು ಸೇವೆ ನೀಡಲು ತೊಂದರೆಯಾಗುತ್ತಿದೆ. ಮೇಗರವಳ್ಳಿ, ದೇವಂಗಿ, ಬೆಜ್ಜವಳ್ಳಿ ಅಟಲ್‌ ಜನಸ್ನೇಹಿ ಕೇಂದ್ರ (ನಾಡಕಚೇರಿ)ಯಲ್ಲಿ ಆಧಾರ್‌ ತಿದ್ದುಪಡಿಯಾಗುತ್ತಿಲ್ಲ. ಕೋಣಂದೂರು ನಾಡಕಚೇರಿಯಲ್ಲಿ ಮಾತ್ರ ಈ ಸೌಲಭ್ಯ ಇದೆ. ವಿದ್ಯುತ್‌ ಸಮಸ್ಯೆ, ಸರ್ವರ್‌ ಸಮಸ್ಯೆ ಹೆಚ್ಚಿದ್ದು ಜನರು ತೊಂದರೆಗೆ ಸಿಲುಕಿದ್ದಾರೆ. ಅಲ್ಲದೇ 20 ಕಿ.ಮೀ. ದೂರದಿಂದ ತಾಲ್ಲೂಕು ಕೇಂದ್ರಕ್ಕೆ ದಿನವಿಡೀ ಅಲೆಯುವಂತಾಗಿದೆ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ.

ಸಾಮಾನ್ಯ ಕೇಂದ್ರಗಳಲ್ಲೂ ನಿರೀಕ್ಷಿತ ಪ್ರಮಾಣದ ಕೆಲಸ ಮಾಡಿಕೊಳ್ಳಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದು ಇದಕ್ಕೆಲ್ಲಾ ಒಂದು ಪರಿಹಾರ ನೀಡಿ ಎಂದು ಆಗ್ರಹಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X