ಶಿವಮೊಗ್ಗ | ಫೆ.22ರಿಂದ ʼಶ್ರೀಕಾಂತಣ್ಣ ಕಪ್ʼ ಕ್ರಿಕೆಟ್‌ ಪಂದ್ಯಾವಳಿ

Date:

Advertisements

ಶಿವಮೊಗ್ಗ ನಗರದ ಎಟಿಎನ್‌ಸಿ ಕಾಲೇಜು ಕ್ರೀಡಾಂಗಣದಲ್ಲಿ ಈ ಬಾರಿ ʼಶ್ರೀಕಾಂತಣ್ಣ ಕಪ್ ಸೀಸನ್-2ʼ ಕ್ರಿಕೆಟ್‌ ಪಂದ್ಯಾವಳಿಯನ್ನು ಇದೇ ಫೆ.22 ಶನಿವಾರ ಹಾಗೂ ಫೆ.23ರ ಭಾನುವಾರದಂದು ಆಯೋಜಿಸಲಾಗಿದೆ.

ಪಂದ್ಯಾವಳಿ ಅಂಗವಾಗಿ ನಗರದ ಬಿ ಎಚ್ ರಸ್ತೆಯ ಮಥುರಾ ಸೆಂಟ್ರಲ್ ಹೋಟೆಲ್‌ನಲ್ಲಿ ಪಂದ್ಯಾವಳಿಯ ಟೀ ಶರ್ಟ್ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು.

ಈ ಪಂದ್ಯಾವಳಿಯು ಶಿವಮೊಗ್ಗದ ಪ್ರತಿಷ್ಠಿತ 12 ಕ್ರಿಕೆಟ್ ತಂಡಗಳ ಲೀಗ್ ಹಂತದ 6 ಓವರ್‌ಗಳದ್ದಾಗಿರುತ್ತದೆ. ಪ್ರಥಮ ಬಹುಮಾನ 30000/- ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 15000/- ಹಾಗೂ ಆಕರ್ಷಕ ಟ್ರೋಫಿಯನ್ನು ಶ್ರೀಕಾಂತಣ್ಣ ಕಪ್‌ ಪಂದ್ಯಾವಳಿ ಒಳಗೊಂಡಿದೆ. ಪಂದ್ಯಾವಳಿಯು ʼಗಲ್ಲಿ ಕ್ರಿಕೆಟ್ ಯುಟ್ಯೂಬ್ ಚಾನೆಲ್ʼ ನಲ್ಲಿ ಲೈವ್ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Advertisements
WhatsApp Image 2025 02 20 at 10.16.02 AM

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

ಈ ವೇಳೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಗಜೇಂದ್ರನಾಥ, ಸೊಸೈಟಿ ಅಧ್ಯಕ್ಷ ಸಂತೋಷ್ ಸಾಕ್ರೆ, ಹಿರಿಯ ಪತ್ರಕರ್ತ ಮೋಹನ್, ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದಲೆ, ಕಾಂಗ್ರೆಸ್ ಮುಖಂಡ ಭಾಸ್ಕರ್, ಅನಿಲ್, ಉಮೇಶ್, ಸಂತೋಷ್, ಗ್ಯಾರಂಟಿ ಯೋಜನೆ ಸದಸ್ಯ ಬಸವರಾಜ್, ಯುವ ಮುಖಂಡ ಆರ್‌ ಟಿ ಆರ್ ಮಂಜು, ಹಾಲೇಶ್, ಸತ್ಯನಾರಾಯಣ, ವಿನಯ್, ಮೋಹನ್, ಮಂಜು, ಅನಿಲ್, ದರ್ಶನ್ ಹಾಗೂ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X