ಶಿವಮೊಗ್ಗ | ಮಲವಗೊಪ್ಪ ಗ್ರಾಮದಲ್ಲಿ ಏಕಾಏಕಿ ಸರ್ವೆ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

Date:

ಶಿವಮೊಗ್ಗ ಜಿಲ್ಲೆ ಎಸಿ ಸತ್ಯನಾರಾಯಣ ಅವರು ತಮ್ಮ ತಂಡದೊಂದಿಗೆ ಜಿಲ್ಲೆಯ ಮಲವಗೊಪ್ಪ ಗ್ರಾಮಕ್ಕೆ ಸರ್ವೆ ಕಾರ್ಯ ನಡೆಸಲು ಬಂದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

“ನೋಟಿಸ್ ನೀಡಿಲ್ಲ, ಪ್ರಕಟಣೆ ಮಾಡಿಲ್ಲ ಆಟೋ ಅನೌನ್ಸ್ ಮಾಡದೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಬಂದಿರುವುದು ತರವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

“ಈ ಸಂಬಂಧ ಮಲವಗೊಪ್ಪ ಸರ್ವೆ ನಂಬರ್ 50 52 73 ಹಾಗೂ ಇತರೆ ಸರ್ವೆ ಕಾರ್ಯ ಇಟ್ಟಿದ್ದು, ಈ ನಂಬರ್‌ಗಳಲ್ಲಿ ಯಾರ್ಯಾರು ಒತ್ತುವರಿ ಮಾಡಿದ್ದಾರೆ. ಭೂಮಿಯನ್ನು ಹೆಚ್ಚಿಸಿಕೊಂಡಿರುವ ಮಾಹಿತಿ ಪಡೆಯುವ ಸಲುವಾಗಿ ಸರ್ವೆ ಕಾರ್ಯ ಮಾಡಿದ್ದೂ, ಈ ಸಂಬಂಧ ಸಾರ್ವಜನಿಕರು ಪ್ರಕಟಣೆ ಮಾಡಿ ಅಂತ ತಿಳಿಸಿದ್ದೆವು. ಆದರೆ ಅಲ್ಲಿ ನಮಗೆ ಮಾಹಿತಿ ಇಲ್ಲದ ಕಾರಣ ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್ ಕೊಡುವುದಕ್ಕೆ ಆಗಿಲ್ಲ. ಸಾರ್ವಜನಿಕರು ಏನು ತಿಳಿಸಿದ್ದಾರೋ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಯವರು ಹೇಗೆ ಮಾರ್ಗದರ್ಶನ ನೀಡುತ್ತಾರೋ ಹಾಗೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಹಾಗೂ ನ್ಯಾಯಾಲಯದ ಆದೇಶದವನ್ನು ಪಾಲನೆ ಮಾಡಬೇಕಾಗುತ್ತೆ. ಹಾಗೆ ಶೀಘ್ರದಲ್ಲಿ ಪುನಃ ಸರ್ವೆ ಮಾಡಿ ಸಾರ್ವಜನಿಕರೆಲ್ಲರಿಗೂ ಏನು ಅನುಕೂಲ ಮಾಡಿಕೊಡುವುದಕ್ಕೆ ಏನು ಅನುಕೂಲ ಇದೆಯೋ ಅದನ್ನು ಮಾಡಿಕೊಡುತ್ತೇವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ವೆಸರ್ವೆ 1ಸರ್ವೆ 2ಸರ್ವೆ 3

ಶಿವಮೊಗ್ಗ ಜಿಲ್ಲೆ ಎಸಿ ಸತ್ಯನಾರಾಯಣ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸದಾಶಿವಪುರ, ಬೆಳಕಲು, ಮಲವಗೊಪ್ಪ, ಹರಿಗೆ ಮತ್ತು ನಿದಿಗೆ ಗ್ರಾಮಗಳಲ್ಲಿ ಸರ್ವೆ ಕಾರ್ಯ ನಡೆಯುತ್ತಿದ್ದೂ ನ್ಯಾಯಾಲಯ ಇಂತಿಚ್ಟೇ ಸರ್ವೆ ಮಾಡುವಂತೆ ಆದೇಶ ತಿಳಿಸಿದ್ದು, ಆ ಪ್ರಕಾರ ಮಾಡುತ್ತಿದ್ದು ಪಿಟಿಷನ್ ಪ್ರಕಾರ ಯಾರ್ಯಾರ್ ಮಾಡಲು ತಿಳಿಸಿದ್ದಾರೆ. ಆ ಪ್ರಕಾರ ಮಾಡಲು ಪ್ರಯತ್ನ ನಡೆಯುತ್ತಿದೆ. ಆದರೆ ಸಾರ್ವಜನಿಕರು ಹೇಳಿರುವ ಪ್ರಕಾರ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದು ಮಾರ್ಗದರ್ಶನ ರೀತಿ ಮಾಡುತ್ತೇವೆ. ಇದು ನ್ಯಾಯಾಲಯದ ಆದೇಶವಾಗಿರುವುದರಿಂದ ಅದರಂತೆ ಮಾಡುತ್ತಿದ್ದೇವೆ. ಸದ್ಯಕ್ಕೆ ಸರ್ವೆ ನಿಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಮಲವಗೊಪ್ಪ ಗ್ರಾಮಸ್ಥರು ಈ.ದಿನ.ಕಾಮ್‌ಗೆ ಮಾತನಾಡಿ, “ನಾವು 40 ರಿಂದ 50 ವರ್ಷಕ್ಕೂ ಅಧಿಕ ವರ್ಷಗಳಿಂದ ಇಲ್ಲಿಯೇ ವಾಸ ಮಾಡುತ್ತಿದ್ದು, ಮನೆ ಕಂದಾಯ ನೀರಿನ ಕಂದಾಯ ಸರ್ಕಾರದ ಎಲ್ಲವನ್ನೂ ಮಾಡಿಕೊಂಡು ಬಂದಿದ್ದೇವೆ. ಈಗ ಇಷ್ಟು ವರ್ಷ ಇಲ್ಲದೆ ಏಕಾಏಕಿ ಹೀಗೆ ಬಂದು ಸರ್ವೆ ಮಾಡಿ ಅತಿಕ್ರಮ ಮಾಡಿಕೊಂಡಿರುವವರು ತೆರವು ಮಾಡಬೇಕೆನ್ನುವುದು ಎಷ್ಟು ಸರಿ?. ಹೀಗೆ ಏನಾದರು ಮಾಡಿದ್ದೆ ಆದರೆ ನಾವು ವಿಷ ಕುಡಿದೋ ಇಲ್ಲ, ಸಾಯುವ ಪರಿಸ್ಥಿತಿ ಉಂಟಾಗುತ್ತದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಅಧಿಕಾರಿ, ಸಿಬ್ಬಂದಿಗಳಿಗೆ ದೀರ್ಘಾವಧಿ ರಜೆಗೆ ಜಿಲ್ಲಾ ಚುನಾವಣಾಧಿಕಾರಿಯಿಂದ ಮಂಜೂರಾತಿ ಕಡ್ಡಾಯ

“ಶುಗರ್ ಫ್ಯಾಕ್ಟರಿ ಜಾಗ ಇದು ಒತ್ತುವರಿಯಾಗಿದೆ ಎಂದು ಈಗ ಹೇಳುತ್ತಿದ್ದಾರೆ. ಅದರೆ, ನಾವು ಶುಗರ್ ಫ್ಯಾಕ್ಟರಿ ಆಗುವ ಮುಂಚೆಯಿಂದಲೂ ವಾಸ ಇದ್ದೇವೆ. ಹೀಗಾಗಿ ಇದು ರಾಜಕೀಯ ಪ್ರೇರಿತವಾಗಿದೆ. ಈ ನಡೆಯನ್ನು ಕೈ ಬಿಡಬೇಕು. ಇಲ್ಲವಾದರೆ ನಾವು ಹೋರಾಟ ನಡೆಸಬೇಕಾಗಿದೆ” ಎಂದು ಎಚ್ಚರಿಕೆ ನೀಡಿದರು.

ಸದ್ಯಕ್ಕೆ ಅಧಿಕಾರಿಗಳು ಸರ್ವೆ ಕಾರ್ಯವನ್ನು ನಿಲ್ಲಿಸಿದ್ದು, ಜಿಲ್ಲಾಧಿಕಾರಿಯವರ ಗಮನಕ್ಕೆ ತಂದು ಅವರ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ಸರ್ವೆ ಮಾಡುತ್ತೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...