ಶಿವಮೊಗ್ಗ | ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಮೂವರ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರ ಹಿಡಿದು ರಸ್ತೆಯುದ್ದಕ್ಕೂ ಬೈಕ್‌ನಲ್ಲಿ ಓಡಾಡಿದ್ದು, ಸಾರ್ವಜನಿಕರಿಗೆ ಭಯ ಹುಟ್ಟಿಸುವಂತೆ ಮಾಡಿ, ತಮ್ಮ ಬೈಕ್ ದಾಟದಂತೆ ಬೆದರಿಕೆ ಹಾಕುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಶಿವಮೊಗ್ಗ ನಗರದ ಮಿಳಘಟ್ಟ ಮುಖ್ಯ ರಸ್ತೆಯಿಂದ ಅಣ್ಣಾನಗರದ ಕಡೆ ಹೋಗುವ ಮಾರ್ಗದಲ್ಲಿ ಜನವರಿ 13ರ ಸಂಜೆ ಸುಮಾರು 5:30ರಿಂದ 5:45ರ ಸಮಯದಲ್ಲಿ ಅಶೋಕನಗರ ರೆಹಮಾನ್, ಲಷ್ಕರ್ ಮೊಹಲಾ ವಾಸಿ ಮುಸ್ತಫಾ ಮತ್ತು ಜೆ ಪಿ ನಗರ ವಾಸಿ ಜಾಫರ್ ಬೈಕ್‌ನಲ್ಲಿ ಹೋಗುತ್ತಿದ್ದರು.  

ಬೈಕ್‌ನಲ್ಲಿ ಹೋಗುವಾಗ ಈ ಮೂವರು ಕೈಗಳಲ್ಲಿ ಅಪಾಯಕಾರಿ ಆಯುಧಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಭಯವನ್ನುಂಟು ಮಾಡುತ್ತ, ತಮ್ಮ ಬೈಕನ್ನು ಓವರ್ ಟೇಕ್ ಮಾಡಿಕೊಂಡು ಮುಂದೆ ಹೋಗದಂತೆ ಹಿಂಬದಿ ಬರುವ ವಾಹನ ಸವಾರರಿಗೂ ಬೆದರಿಕೆ ಹಾಕುತ್ತಿರುವುದು ದೊಡ್ಡಪೇಟೆ ಪೊಲೀಸರಿಗೆ ಮಾಹಿತಿ ಬಂದಿದೆ.  

Advertisements

ಮಾಹಿತಿ ತಿಳಿದ ಪೊಲೀಸರು ಅಣ್ಣಾನಗರದ ಬಳಿ ಹೋಗುವಾಗ ನಾಲ್ಕನೇ ಕ್ರಾಸ್ ಬಳಿ ಮಾರಕಾಸ್ತ್ರ ಹಿಡಿದುಕೊಂಡು ಹೋಗುತ್ತಿದ್ದ ಆರೋಪಿಗಳು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.  

ಈ ಸುದ್ದಿ ಓದಿದ್ದೀರ ? ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣ; ಓರ್ವನ ಬಂಧನದ ಕುರಿತು ಎಸ್‌ಪಿ ಪ್ರತಿಕ್ರಿಯೆ

ಆರೋಪಿಗಳು ಮಿಳಘಟ್ಟ ಮುಖ್ಯ ರಸ್ತೆಯಿಂದಲೂ ಮಾರಕಾಸ್ತ್ರ ಹಿಡಿದು ಜನರಿಗೆ ತೋರಿಸುತ್ತ ಭಯವನ್ನುಂಟುಮಾಡಿದ್ದರು. ಅಲ್ಲದೆ ಹಿಂಬಾಗ ಬರುವ ವಾಹನ ಸವಾರಿಗೆ ಮುಂದೆ ಹೋಗದಂತೆ ತಡೆಯುತ್ತ ತೊಂದರೆ ನೀಡಿದ ಮೂವರ ವಿರುದ್ಧ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X