ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

Date:

Advertisements

ಶಿವಮೊಗ್ಗ ನಗರದ ಹೋಟೆಲ್‌ವೊಂದರಲ್ಲಿ ಪರಿಚಯಸ್ಥ ಹುಡುಗಿಯೊಂದಿಗೆ ಊಟ ಮಾಡುವ ವೇಳೆ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಪಡ್ಡೆ ಹುಡುಗರ ಗುಂಪೊಂದು ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನವಾಗಿದೆ.

ಹೋಟೆಲ್‌ನಲ್ಲಿ ಕುಳಿತಿದ್ದ ಯುವಕ-ಯುವತಿಯ ವಿಡಿಯೋ ಮಾಡಿ ಅವರನ್ನು ಅಪಹರಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದು, ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಈ ಪ್ರಕರಣವನ್ನು ಬೇಧಿಸಿ ಮೂವರನ್ನೂ ಬಂಧಿಸಿದ್ದಾರೆ.

ಭದ್ರಾವತಿಯ ದೊಡ್ಡಗಟ್ಟದ ಯುವಕ ಶಹಿದ್ ಫಜಲ್ ಎಂಬಾತ ಪರಿಚಯಸ್ಥ ಯುವತಿಯೊಂದಿಗೆ ಶಿವಮೊಗ್ಗದ ʼಅಮ್ಮ ಹೋಟೆಲ್ʼಗೆ ಬಂದಿದ್ದನು. ಈ ಯುವಕ ಬಿಯರ್ ತೆಗೆದುಕೊಂಡು ಊಟಕ್ಕೆ ಕುಳಿತಿದ್ದನು. ಈ ವೇಳೆ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಪುಂಡ ಪೋಕರಿ ಇಲಿಯಾಜ್‌ನ ಗ್ಯಾಂಗ್ ವಿಡಿಯೊ ಮಾಡಿಕೊಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಮೈಕ್ರೋ ಫೈನಾನ್ಸ್ ನಿಯಮಗಳ ಬಗ್ಗೆ ಸಾರ್ವಜನಿಕ ಸಭೆ : ನಬಾರ್ಡ್, ಲೀಡ್ ಬ್ಯಾಂಕ್ ಅಧಿಕಾರಿಗಳು ಭಾಗಿ

ಪ್ರಕರಣವನ್ನು ಬೇಧಿಸಿದ ತುಂಗಾನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಪೇಟೆಯಿಲಿಯಾಜ್ ಯಾನೆ ಇಲ್ಲು, ಚೀಲೂರಿನ ಮೊಹಮದ್ ವಾಸಿಮ್, ಅಣ್ಣನಗರದ ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X