ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳ ವರ್ಗಾವಣೆ

Date:

Advertisements

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕಳೆದ ಮೂರು ವರ್ಷಗಳಿಂದ ಮಂಡಗದ್ದೆ ಮತ್ತು ಮೇಗರವಳ್ಳಿ (ಆಗುಂಬೆ) ವಲಯ ಅರಣ್ಯ ಅಧಿಕಾರಿಗಳಾಗಿ ಅರಣ್ಯ ರಕ್ಷಣೆ , ಅರಣ್ಯದಲ್ಲಿನ ಅಕ್ರಮಗಳ ನಿಯಂತ್ರಣ, ಮಣ್ಣು ಮಾಫಿಯಾ, ಮರಳು ಮಾಫಿಯಾದ ವಿಚಾರಗಳಲ್ಲಿ ಹದ್ದಿನ ಕಣ್ಣಿಟ್ಟು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದ ಮಂಡಗದ್ದೆ ವಲಯ ಅರಣ್ಯ ಅಧಿಕಾರಿ ಆದರ್ಶ.ಎಂ.ಪಿ. ಅವರನ್ನು ಕೊಪ್ಪ ವಿಭಾಗದ ಚಿಕ್ಕ ಅಗ್ರಹಾರ (ಎನ್ ಆರ್ ಪುರ) ವಲಯ ಅರಣ್ಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ವಿನಯಕುಮಾರ್ ಆರ್ ಬೇಲೂರು ಹಾಸನ ಜಿಲ್ಲೆಯಿಂದ ಮಂಡಗದ್ದೆಗೆ ವರ್ಗಾವಣೆ ಮಾಡಲಾಗಿದೆ.

Advertisements

ಮಂಡಗದ್ದೆಯಲ್ಲಿ ಉತ್ತಮ ಕೆಲಸ ಮಾಡಿ ಜನರಿಂದ ಹೆಸರು ಗಳಿಸಿರುವ ಮೇಗರವಳ್ಳಿ (ಆಗುಂಬೆ) ಮಧುಕರ್ ಎನ್.ವಿ. ರವರನ್ನು ಶೃಂಗೇರಿ ವಲಯ ಅರಣ್ಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಹೇಮಗಿರಿ ಅಂಗಡಿ ಅವರನ್ನು ಮಂಗಳೂರಿನಿಂದ ಮೇಗರವಳ್ಳಿಗೆ ವರ್ಗಾವಣೆ ಮಾಡಲಾಗಿದೆ.

ತೀರ್ಥಹಳ್ಳಿಯ ವಲಯ ಅರಣ್ಯ ಅಧಿಕಾರಿ ಡಾಕ್ಟರ್ ಲೋಕೇಶ್ ಎಸ್. ಎಲ್. ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿಗೆ ಸಂಜಯ್ .ಬಿ. ಎಸ್. ನಗರ ವಲಯದಿಂದ ವರ್ಗಾವಣೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ತುಮಕೂರು | ಸಿನಿಮೀಯ ರೀತಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ಹೆಡ್‌ ಕಾನ್ಸ್‌ಟೇಬಲ್; ವ್ಯಾಪಕ‌‌ ಶ್ಲಾಘನೆ

ತೀರ್ಥಹಳ್ಳಿಯಲ್ಲಿ ಈ ಹಿಂದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ, ಅಂದಿನ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಅವರೊಂದಿಗೆ ಸೇರಿಕೊಂಡು ತುಂಗಾ ಕಾಲೇಜು ಆವರಣ, ಪ್ರವಾಸಿ ಮಂದಿರ, ಕುಶಾವತಿ ನೆಹರೂ ಪಾರ್ಕ್, ಎಡೇಹಳ್ಳಿ ಕೆರೆಯ ಮೇಲ್ಭಾಗದ ಅಬ್ದುಲ್ ಕಲಾಂ ಉದ್ಯಾನವನ ಮುಂತಾದ ಹತ್ತಾರು ಕಡೆಯಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಇಂದಿಗೂ ಗಿಡಗಳನ್ನು ಸಂರಕ್ಷಣೆಯಾಗಿ ಮಾದರಿಯಾಗಿದ್ದ ಮಧುಸೂದನ್ .ಎ .ರವರನ್ನು ತೀರ್ಥಹಳ್ಳಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X