ಶಿವಮೊಗ್ಗ | ರೈತ ಸಂಘದ ಮುಖಂಡ ಎಸ್. ಶಿವಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಭೆ

Date:

Advertisements

ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪಸಭೆಯನ್ನುದ್ದೇಶಿಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರು 30ವರ್ಷಗಳಿಂದ ರೈತ ಸಂಘಟನೆಯಲ್ಲಿದ್ದು, ಗ್ರಾಮ, ತಾಲೂಕು, ಜಿಲ್ಲಾ ಪದಾಧಿಕಾರಿಯಾಗಿ ಈಗ ಹಾಲಿ ಜಿಲ್ಲಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದರು. ರೈತ ಚಳವಳಿಯ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ರೈತರಿಗೆ, ಜನಸಾಮಾನ್ಯರಿಗೆ ಸ್ಪಂದಿಸುವಂತ ಸೇವೆಗಳು ಪ್ರಶಂಸನೀಯ ಎಂದರು.

ರೈತ ಸಂಘದಲ್ಲಿ ಒಬ್ಬ ಮಾದರಿ ಕಾರ್ಯಕರ್ತರಾಗಿದ್ದರು. ಅವರ ಅಕಾಲಿಕ ಮರಣ ರೈತ ಸಂಘಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆದ್ದರಿಂದ ಇಂದು ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಛೇರಿಯಲ್ಲಿ ಅವರ ಶ್ರದ್ಧಾಂಜಲಿ ಸಭೆಯನ್ನು ನಡೆಸುತ್ತಿದ್ದೇವೆ ಎಂದರು.

Advertisements

ರೈತರ ಸಮಸ್ಯೆಗಳು ದಿನೆ ದಿನೇ ಹೆಚ್ಚಾಗುತ್ತಿವೆ. ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ದಾವಿಸಬೇಕು. ಇವತ್ತಿನ ಸಂದರ್ಭದಲ್ಲಿ ಯುವಕರು ರಾಜಕಾರಣದಲ್ಲಿ ಸೇವೆ ಮಾಡುವುದಕ್ಕಿಂತ ಗ್ರಾಮೀಣ ಪ್ರದೇಶದ ರೈತರ, ಬಡವರ, ಕೃಷಿ ಕೂಲಿಕಾರ್ಮಿಕರ ಸಮಸ್ಯೆಗಳನ್ನ ಕೈಗೆತ್ತಿಕೊಂಡು ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿಗಳಾದ ಡಾ.ಬಿ.ಎಂ ಚಿಕ್ಕಸ್ವಾಮಿ, ರಾಜ್ಯ ಉಪಾಧ್ಯಕ್ಷ ಟಿ.ಎಂ ಚಂದ್ರಪ್ಪ, ಜಿಲ್ಲಾ ಗೌರವಾಧ್ಯಕ್ಷ ಈಶಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ. ಜಗದೀಶ್, ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಡಿ. ಮಂಜಪ್ಪ, ಕೆ.ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಎಂ.ಮಹೇಶ್ವರಪ್ಪ, ಜಯಣ್ಣ, ಎಂ.ಮಂಜಪ್ಪ, ಪಿ.ಶೇಖರಪ್ಪ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಜಿಲ್ಲಾ ಹಸಿರುಸೇನೆ ಸಂಚಾಲಕ ಎಂ.ಡಿ. ನಾಗರಾಜ್ ಹಾಗೂ ಜಿಲ್ಲೆ, ತಾಲೂಕು ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X