ಶಿವಮೊಗ್ಗ | ಸರ್ಕಾರಿ ಉರ್ದು ಶಾಲೆಯ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯ

Date:

Advertisements

ಶಿವಮೊಗ್ಗ ನಗರದ ಹೃದಯ ಭಾಗದ ಕರ್ನಾಟಕ ಸಂಘದ ಹಿಂಭಾಗ ಇರುವ ಶತಮಾನೋತ್ಸವ ಆಚರಿಸಿರುವ, ಹಾಗೂ ಇಂದಿನ ಬಹಳಷ್ಟು ಗಣ್ಯರು ಓದಿರುವ ಶಾಲೆಯ ಪ್ರಸ್ತುತ ಹಂತ ದುಃಸ್ಥಿತಿಗೆ ತಲುಪಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಈ ಶಾಲೆಯ ಆವರಣದಲ್ಲಿ ಕನ್ನಡ, ಉರ್ದು ಹಾಗೂ ತಮಿಳು ಮಾದ್ಯಮ ಶಾಲೆ, ಪಿಯು ಕಾಲೇಜು ಮತ್ತು ಪದವಿ ಕಾಲೇಜು ಹೀಗೆ ಎಲ್ಲ ಶಾಲಾ ಕಾಲೇಜುಗಳು ಒಂದೇ ಆವರಣದಲ್ಲಿ ಬರುವ ಆವರಣದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಹೇಳಲಸಾಧ್ಯವಾಗಿದೆ” ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ತಡೆಗೋಡೆ

“ಶಿವಮೊಗ್ಗ ನಗರದ ಹೃದಯ ಭಾಗದಲ್ಲಿ ಇರುವ ಉರ್ದು ಪ್ರೌಢ ಶಾಲೆಯ ತಡೆಗೋಡೆ ಕುಸಿದಿದ್ದು, ಗೇಟ್ ಕೂಡ ಇಲ್ಲದಂತಾಗಿದೆ. ಇದರಿಂದ ಶಾಲೆ-ಕಾಲೇಜುಗಳು ಮುಗಿದ ಬಳಿಕ ಈ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಜತೆಗೆ ಪುಂಡರ ಹಾವಳಿಗಳು ಹೆಚ್ಚಾಗಿದೆ. ಹೀಗಿದ್ದರೂ ಕೂಡ ಸ್ಥಳೀಯ ಆಡಳಿತವಾಗಲಿ, ಶಿಕ್ಷಣ ಇಲಾಖೆಯಾಗಲಿ, ಮಹಾನಗರ ಪಾಲಿಕೆಯಾಗಲಿ ಶಾಲೆಯತ್ತ ಗಮನ ಹರಿಸದೆ ನಿರ್ಲಕ್ಷ ವಹಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ” ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Advertisements

“ಶಾಲೆಯ ಆವರಣದ ತಡೆಗೋಡೆ ಬಹಳ ಹಳೆಯದಾಗಿದ್ದು ಹಾಗೂ ಮಳೆ ಬಂದು ಶಿಥಿಲಗೊಂಡು ಕುಸಿದು ಹಲವು ತಿಂಗಳುಗಳೇ ಕಳೆದಿವೆ. ತಡೆಗೋಡೆ ಪಕ್ಕದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆ ಹಿಂಭಾಗ ಶಾಲಾ ಆವರಣದ ಒಳ ಬರಲು ಜಾಗವಿದ್ದು, ಮತ್ತೆ ಶಾಲೆಗೆ ಗೇಟ್ ಇಲ್ಲದ ಕಾರಣ
ಶಾಲಾ ವೇಳೆಯ ನಂತರ ಅಕ್ರಮ ಚಟುವಟಿಕೆಯ ತಾಣವಾಗಿದೆ” ಎಂದು ಸಾರ್ವಜನಿಕರು ಆರೋಪಿಸಿದರು.

ಶಾಲೆ ತಡೆಗೋಡೆ

ಈ ವಿಷಯಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ‌ ನಾಗರಾಜ್ ಅವರನ್ನು ಸಂಪರ್ಕಿಸಿದೆ. ಬಳಿಕ ಅವರು ಮಾತನಾಡಿ, “ಈ ಶಾಲಾ ಆವರಣ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತಿದ್ದು, ಒಂದು ವರ್ಷದ ಹಿಂದೆಯೇ ತಡೆಗೋಡೆ ಕುಸಿದಿದೆ. ಇದನ್ನು ರಿಪೇರಿ ಮಾಡಿಸಿಕೊಡಿ ಎಂದು ವರ್ಷದ ಹಿಂದೆಯೇ, ಮಹಾನಗರ ಪಾಲಿಕೆ ಗಮನಕ್ಕೆ ತಂದಿದ್ದು, ಮನವಿಯನ್ನೂ ಸಲ್ಲಿಸಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭೂಹಗರಣ ಹೆಚ್ಚಳ; ಕಡತ ವಿಚಾರಣೆ ವೇಳೆ 750 ಎಕರೆ ಅಕ್ರಮ ಜಮೀನು ಪತ್ತೆ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇದಕ್ಕೆ ಅನುದಾನ ಬಿಡುಗಡೆಯಾಗದ ಕಾರಣ ತಡೆಗೋಡೆ, ಗೇಟ್ ಮತ್ತು ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲವೆಂದು ಹೇಳುತ್ತಿದೆ. ಹಾಗಾಗಿ ಇದು ಸಮಸ್ಯೆಯಾಗಿ ಉಳಿದಿದೆ. ಮತ್ತೊಮ್ಮೆ ಈ ಕುರಿತು ಮಹಾನಗರ ಪಾಲಿಕೆ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.

ಸಂಜೆ ಶಾಲಾ ಸಮಯದ ನಂತರ ಅತಿಕ್ರಮ ಪ್ರವೇಶ ಆಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಗುವುದು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತಿಳಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X