ಶಿವಮೊಗ್ಗ | ಕಾಂಗ್ರೆಸ್ ಸದಸ್ಯೆ ಲಲಿತಮ್ಮಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್

Date:

Advertisements

ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ ಉಪಾಧ್ಯಕ್ಷರಿಲ್ಲ. ಈಗ ಅಧ್ಯಕ್ಷ‌ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ ಮೀಸಲಾತಿ ಹೊರಡಿಸಿ ಸರ್ಕಾರ ಆದೇಶಿಸಿತ್ತು.

“ಮೀಸಲಾತಿಯನ್ನು ಪ್ರಶ್ನಿಸಿ ಕಾಂಗ್ರೆಸ್ ಸದಸ್ಯೆ ಲಲಿತಮ್ಮ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಇದನ್ನು ನಗರಸಭೆ ಸಭೆಯಲ್ಲಿ ಪ್ರಶ್ನಿಸಿದಾಗ, ʼಕಾಂಗ್ರೆಸ್ ಹಿತಾಸಕ್ತಿಯಿಂದ ತಡೆಯಾಜ್ಞೆ ತರಲಾಗಿತ್ತ ಅಥವಾ ಲಲಿತಮ್ಮನವರ ಸ್ವಇಚ್ಛೆಯಿಂದ ತಂದಿದ್ದʼ ಎಂದು ಕೇಳಿದ್ದೆ. ಕಾಂಗ್ರೆಸ್ ಪಕ್ಷ ಲಲಿತಮ್ಮರ ಸ್ವಇಚ್ಛೆಯೆಂದು ಹೇಳಿತ್ತು. ನಗರ ಸಭೆಯ ಕಾಯ್ದೆ ಪ್ರಕಾರ‌ ತಡೆಯಾಜ್ಞೆ ತಂದವರು ಸಭೆಗೆ ಭಾಗಿಯಾಗುವಂತಿಲ್ಲವೆಂಬ ಕಾನೂನು ಇದೆ. ಆದರೆ ಲಲಿತಮ್ಮ ಸಭೆಗೆ ಭಾಗಿಯಾಗಿ ನಮ್ಮ ವಿರುದ್ಧವೇ ಆರೋಪಿಸಿದರು” ಎಂದು ಹೇಳಿದರು.‌

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆ ಬೃಹತ್ ಪ್ರತಿಭಟನೆ

“ತಡೆಯಾಜ್ಞೆ ತಂದು ಅಪರಾಧಿಯಾಗಿದ್ದೀರೆಂದು ಹೇಳಿದ್ದು ಸತ್ಯ. ಆದರೆ ಅದರ ಉದ್ದೇಶ ಅವರನ್ನು ನಿಂದಿಸುವುದಾಗಿರಲಿಲ್ಲ. ಅದರ ಹಿಂದಿನ ಉದ್ದೇಶ ಮಹಿಳೆಯ ಸಬಲೀಕರಣಕ್ಕೆ ತಡೆಯಾಜ್ಞೆ ತರಲಾಗಿದೆಯೆಂಬ ಉದ್ದೇಶವಿತ್ತು. ಪೂರ್ವಾಗ್ರಹ ಪೀಡಿತ ಅಂಶ ನನ್ನ ಹೇಳಿಕೆ ಹಿಂದಿರಲಿಲ್ಲ” ಎಂದು ಹೇಳಿದ್ದಾರೆ.

“ಆದರೂ ನಾನು, ಗಣೇಶ್ ಪ್ರಸಾದ್, ಮಧುರಾ ಶಿವಾನಂದ್ ಮತ್ತು ಮಹೇಶ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ಅವರ ಮನಸ್ಸಿಗೆ ನೋವಾಗಿದ್ದರೆ, ನಾನು ಸೇರಿ ನಾಲ್ವರು ಕ್ಷಮೆಯಾಚಿಸಿದ್ದೇವೆ” ಎಂದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X