ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು 9ನೇ ದಿನವೂ ಮುಂದುವರಿಸಲಾಗಿದೆ.
ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದೆ” ಎಂಬುದನ್ನು ದೃಢೀಕರಿಸಿದ್ದಾರೆ.
Update on operation at Shiroor landslide.
One truck has been definitively located in the water and that the naval deep divers will attempt anchoring shortly.
The long arm boomer excavator will be used to dredge the river.
Advanced drone based Intelligent Underground Buried…— Krishna Byre Gowda (@krishnabgowda) July 24, 2024
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದ್ದು, ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಲಂಗರು ಹಾಕಲು ಪ್ರಯತ್ನಿಸುತ್ತಾರೆ. ಟ್ರಕ್ ಅನ್ನು ನದಿಯಿಂದ ಮೇಲೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಂಕೋಲಾ ದುರಂತ | ಕಾರ್ಯಾಚರಣೆಗಾಗಿ ಶಿರೂರು ತಲುಪಿದ ಬೂಮ್ ಪೊಕ್ಲೇನ್ ಯಂತ್ರ
“ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಅಂಡರ್ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ಮೃತದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂಲಕ ಹುಡುಕಾಟ ನಡೆಸುತ್ತಿದೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಬೂಮ್ ಪೊಕ್ಲೇನ್ ಯಂತ್ರ
ಶಿರೂರು ಭೂಕುಸಿತದಲ್ಲಿ ಸಿಲುಕಿರುವವರ ಹುಡುಕಾಟಕ್ಕೆ ಬೂಮ್ ಎಕ್ಸ್ಕಾವೇಟರ್ ಅಥವಾ ಬೂಮ್ ಪೊಕ್ಲೇನ್ ಯಂತ್ರವನ್ನು ಬೆಳಗಾವಿಯಿಂದ ತರಿಸಲಾಗಿದ್ದು, ಈಗಾಗಲೇ ಕಾರ್ಯಾಚರಣೆ ಆರಂಭಿಸಿದೆ.
