ಶಿರೂರು ಗುಡ್ಡ ಕುಸಿತ; ಇನ್ನೂ ಪತ್ತೆಯಾಗಿಲ್ಲ ಇಬ್ಬರ ಶವ – ಮರಣ ಪತ್ರವನ್ನೂ ನೀಡದ ಆಡಳಿತ

Date:

ಕಳೆದ ಜುಲೈನಲ್ಲಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಭೀಕರ ಗುಡ್ಡಕುಸಿತ ದುರ್ಘಟನೆಯು ದೇಶದ ಗಮನ ಸೆಳೆದಿತ್ತು. ಗುಡ್ಡ ಕುಸಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಕೇರಳದ ಲಾರಿ ಚಾಲಕ ನದಿಗೆ ಬಿದ್ದಿದ್ದರಿಂದ ಕೇರಳದ ಬಹುಸಂಖ್ಯೆಯ ಮಾಧ್ಯಮಗಳು ಶಿರೂರಿನಲ್ಲಿ ಬೀಡುಬಿಟ್ಟು, ವರದಿ ಮಾಡಿದ್ದವು. ಆ ದುರ್ಘಟನೆಯಲ್ಲಿ ಕಾಣೆಯಾದವರಲ್ಲಿ ಇನ್ನೂ ಇಬ್ಬರ ಮೃತದೇಹಗಳು ಪತ್ತೆಯಾಗಿಲ್ಲ. ಆದರೆ, ಕಾಣೆಯಾದವರ ಪತ್ತೆ ಕಾರ್ಯಾಚರಣೆ ಈಗಾಗಲೇ ಸ್ಥಗಿತಗೊಂಡಿದ್ದು, ತಮ್ಮ ಸ್ವಂತದವರನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.

- Advertisement -

ನಿರಂತರ ಕಾರ್ಯಾಚಣೆಯಿಂದಾಗಿ 9 ಮಂದಿಯ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಆದರೆ, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಎಂಬವರ ಮೃತದೇಹ ಪತ್ತೆಯಾಗಿಲ್ಲ. ಆದರೂ, ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಅವರು ಮೃತಪಟ್ಟಿದ್ದಾರೆಂದು ಮರಣ ಪ್ರಮಾಣ ಪತ್ರವನ್ನಾದರೂ ಕೊಡಿ ಎಂದು ಆಡಳಿತದಲ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಆ ಇಬ್ಬರು ಮೃತಪಟ್ಟಿದ್ದಾರೆಂದು ಮರಣ ಪ್ರಮಾಣ ಪತ್ರವನ್ನೂ ಕೊಡುತ್ತಿಲ್ಲ. ಹೀಗಾಗಿ ಮರಣ ಪತ್ರ ಕೊಡಿ, ಇಲ್ಲವೇ ಕಾರ್ಯಾಚರಣೆ ಮುಂದುವರೆಸಿ ಎಂದು ಕಾಣೆಯಾದವರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ನಡುವೆ, ಶಿರೂರು ಗುಡ್ಡ ಅಗೆದು ರಸ್ತೆ ನಿರ್ಮಾಣ ಮಾಡಿದ್ದ ಐಆರ್‌ಬಿ ಕಂಪನಿಯು ಅವೈಜ್ಞಾನಿಕವಾಗಿ ಗುಡ್ಡ ಅಗೆದಿದ್ದರಿಂಂದಲೇ ಗುಡ್ಡ ಕುಸಿತ ಸಂಭವಿಸಿದೆ ಎಂದು ಕಂಪನಿಯ ವಿರುದ್ಧ ದೂರು ದಾಖಲಿಸಲಾಗಿದೆ. ಆದರೆ, ಕಂಪನಿಯೊಂದಿಗೆ ಎಸ್​ಪಿ ಎಂ ನಾರಾಯಣ್ ಹೊಂದಾಣಿಕೆ ಮಾಡಿಕೊಂಡಿದ್ದು, ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂಬ ಆರೋಪಗಳಿವೆ. ಎಸ್​​ಪಿ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂಬ ಒತ್ತಾಯಗಳೂ ಕೇಳಿಬಂದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...